ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಶಾಸಕ ಶ್ರೀ ರಘುಪತಿ ಭಟ್ ರವರಿಗೆ ಮತೀಯವಾದಿಗಳು ಬೆದರಿಕೆ ಕರೆ ಮಾಡಿರುವುದು ಖಂಡನೀಯ, ಈ ಬೆದರಿಕೆಗಳಿಗೆ ಮಣಿದು ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಕಾಲೇಜಿನ ಶಿಸ್ತು ಮತ್ತು ಹಿಜಾಬ್ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಯತ್ನಿಸುತ್ತಿರುವ ಶಾಸಕರಿಗೆ ಬೆದರಿಕೆ ಹಾಕಿ ಮಾನಸಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಿರುವುದು ಖೇದಕರ, ಈ ಮೂಲಕ ಹಿಜಾಬ್ ವಿವಾದದಲ್ಲಿನ ಮತೀಯವಾದಿಗಳ ಪೂರ್ವ ನಿಯೋಜಿತ ಸಂಚು ಬಯಲಾಗಿದೆ.
ನನಗೂ ಕಳೆದ ಕೆಲವು ದಿನಗಳಿಂದ ಹೋರಾಟದಿಂದ ಹಿಂದೆ ಸರಿಯುವಂತೆ ಮೊಬೈಲ್ ಸಂದೇಶ ಬರುತ್ತಿದ್ದು ಈ ವರೆಗೆ ಯಾವುದೇ ಕರೆ ಬಂದಿಲ್ಲ.
25 ವರ್ಷಗಳಿಂದ ಹಿಂದೂ ಕಾರ್ಯಕರ್ತನಾಗಿ ಹಲವಾರು ಬೆದರಿಕೆ, ಒತ್ತಡಗಳನ್ನು ಎದುರಿಸಿಕೊಂಡೇ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ರಾಷ್ಟ್ರೀಯವಾದಿ ಚಿಂತನೆಯೊಂದಿಗೆ ಸಮಾಜದ ಸ್ವಾಸ್ಥ್ಯವನ್ನು ಹದಗೆಡಿಸಲು ಯತ್ನಿಸುತ್ತಿರುವ ಮತೀಯವಾದಿಗಳ ಬೆದರಿಕೆಗೆ ಮಣಿದು ಸಿದ್ಧಾಂತದೊಂದಿಗೆ ರಾಜೀಯಾಗುವ ಪ್ರಶ್ನೆಯೇ ಇಲ್ಲ.
ದೇಶದಾದ್ಯಂತ ಅರಾಜಕತೆ ಸೃಷ್ಟಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುನ್ನಾರದ ಭಾಗವಾಗಿ ಉಡುಪಿಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿ ದೇಶವ್ಯಾಪಿಯಾಗಿಸಲು ನಿರತರಾಗಿರುವ ಸಂಘಟನೆಗಳ ಮುಖವಾಡ ಶೀಘ್ರದಲ್ಲೇ ಕಳಚಲಿದೆ.
ಶಾಸಕರ ನೇತೃತ್ವದಲ್ಲಿ ಹಿಜಾಬ್ ವಿವಾದಕ್ಕೆ ತಾರ್ಕಿಕ ಅಂತ್ಯ ನೀಡಲು ನ್ಯಾಯಾಲಯದ ತೀರ್ಪಿನ ನಿರೀಕ್ಷೆಯಲ್ಲಿದ್ದು, ಹಿಂದೂ ಪರ ಕಾರ್ಯಕರ್ತರು ಶಾಸಕರ ಪರ ಸದಾ ನಿಲ್ಲಲಿದ್ದು, ಶಾಸಕರಿಗೆ ಬೆದರಿಕೆ ಕರೆ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…