ಬೆಂಗಳೂರು : ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ಧರ್ಮಾಚರಣೆಗೆ ಚರ್ಚ್, ಮಸೀದಿ, ಮಂದಿರಗಳಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು,ವಿದ್ಯಾರ್ಥಿಗಳು ಕಲಿತು ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂಬ ಸಂಸ್ಕಾರ ಕಲಿಯಲು ಒಳ್ಳೆಯದಾಗುತ್ತದೆ.ಧರ್ಮ ಆಚರಣೆಗೆ ಪೂಜೆ ಪುನಸ್ಕಾರಕ್ಕೆ ಚರ್ಚ್, ಮಸೀದಿ, ದೇವಸ್ಥಾನಗಳಿವೆ.ಅಲ್ಲಿ ಏನು ಮಾಡಲೂ ನಾವು ಸ್ವತಂತ್ರರು ಎಂದರು.
ಶಾಲೆಗಳಲ್ಲಾದರೂ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯದಿದ್ದರೆ ಹೇಗಾಗುತ್ತದೆ? ಎಲ್ಲರೂ ಕೂಡಾ ಈ ಬಗ್ಗೆ ಯೋಚನೆ ಮಾಡಬೇಕು ಎಂದರು.
ಹಿಜಾಬ್ ಹಿಂದೆ ಇರುವ ಮತೀಯ ಸಂಘಟನೆಗಳ ಬಗ್ಗೆ ಗಮನ ಕೊಡಲು ಪೊಲೀಸರಿಗೆ ಹೇಳಿದ್ದೇನೆ. ರಾಷ್ಟ್ರ ಒಗ್ಗಟ್ಟಾಗಬೇಕು ಎಂಬುದಕ್ಕೆ ಅಡ್ಡಗಾಲಾಗುವವರನ್ನು ಸರಿ ಮಾಡುವ ಕೆಲಸ ನಾವು ಮಾಡಬೇಕಾಗುತ್ತದೆ. ಯಾವುದೇ ಧರ್ಮದವರು ಅವರವರ ಧರ್ಮ ಆಚರಣೆ ಮಾಡಲು ಶಾಲೆಗೆ ಬರುವುದಲ್ಲ.ಎಲ್ಲರೂ ಸೇರಿ ಭಾರತ ಮಾತೆಯ ಮಕ್ಕಳು ಎಂದು ವ್ಯಾಸಂಗಕ್ಕೆ ಬರಬೇಕು ಎಂದು ಅಭಿಪ್ರಾಯಪಟ್ಟರು.
ಶಾಲೆ ಕಾಂಪೌಂಡ್ ಒಳಗೆ ಹಿಜಾಬ್ ಧರಿಸಬಾರದು, ಹಸಿರು ಶಾಲು, ಕೇಸರಿ ಶಾಲು ಧರಿಸಬಾರದು.ಶಾಲಾ ಮ್ಯಾನೇಜ್ ಮೆಂಟ್ ಹೇಳುವ ರೀತಿ ನಡೆದುಕೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ :
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…