ಬೆಂಗಳೂರು : ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ಧರ್ಮಾಚರಣೆಗೆ ಚರ್ಚ್, ಮಸೀದಿ, ಮಂದಿರಗಳಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು,ವಿದ್ಯಾರ್ಥಿಗಳು ಕಲಿತು ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂಬ ಸಂಸ್ಕಾರ ಕಲಿಯಲು ಒಳ್ಳೆಯದಾಗುತ್ತದೆ.ಧರ್ಮ ಆಚರಣೆಗೆ ಪೂಜೆ ಪುನಸ್ಕಾರಕ್ಕೆ ಚರ್ಚ್, ಮಸೀದಿ, ದೇವಸ್ಥಾನಗಳಿವೆ.ಅಲ್ಲಿ ಏನು ಮಾಡಲೂ ನಾವು ಸ್ವತಂತ್ರರು ಎಂದರು.
ಶಾಲೆಗಳಲ್ಲಾದರೂ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯದಿದ್ದರೆ ಹೇಗಾಗುತ್ತದೆ? ಎಲ್ಲರೂ ಕೂಡಾ ಈ ಬಗ್ಗೆ ಯೋಚನೆ ಮಾಡಬೇಕು ಎಂದರು.
ಹಿಜಾಬ್ ಹಿಂದೆ ಇರುವ ಮತೀಯ ಸಂಘಟನೆಗಳ ಬಗ್ಗೆ ಗಮನ ಕೊಡಲು ಪೊಲೀಸರಿಗೆ ಹೇಳಿದ್ದೇನೆ. ರಾಷ್ಟ್ರ ಒಗ್ಗಟ್ಟಾಗಬೇಕು ಎಂಬುದಕ್ಕೆ ಅಡ್ಡಗಾಲಾಗುವವರನ್ನು ಸರಿ ಮಾಡುವ ಕೆಲಸ ನಾವು ಮಾಡಬೇಕಾಗುತ್ತದೆ. ಯಾವುದೇ ಧರ್ಮದವರು ಅವರವರ ಧರ್ಮ ಆಚರಣೆ ಮಾಡಲು ಶಾಲೆಗೆ ಬರುವುದಲ್ಲ.ಎಲ್ಲರೂ ಸೇರಿ ಭಾರತ ಮಾತೆಯ ಮಕ್ಕಳು ಎಂದು ವ್ಯಾಸಂಗಕ್ಕೆ ಬರಬೇಕು ಎಂದು ಅಭಿಪ್ರಾಯಪಟ್ಟರು.
ಶಾಲೆ ಕಾಂಪೌಂಡ್ ಒಳಗೆ ಹಿಜಾಬ್ ಧರಿಸಬಾರದು, ಹಸಿರು ಶಾಲು, ಕೇಸರಿ ಶಾಲು ಧರಿಸಬಾರದು.ಶಾಲಾ ಮ್ಯಾನೇಜ್ ಮೆಂಟ್ ಹೇಳುವ ರೀತಿ ನಡೆದುಕೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ :
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…