Featured

ಹಿಜಾಬ್ ವಿವಾದ: ರಾಜ್ಯದ ಕೆಲವು ಮಕ್ಕಳ ಪೋಷಕರು ಮತೀಯ ಸಂಘಟನೆಯಲ್ಲಿದ್ದಾರೆ : ಆರಗ ಜ್ಞಾನೇಂದ್ರ -Vishwanews24

ಹಿಜಾಬ್ ವಿವಾದ: ರಾಜ್ಯದ ಕೆಲವು ಮಕ್ಕಳ ಪೋಷಕರು ಮತೀಯ ಸಂಘಟನೆಯಲ್ಲಿದ್ದಾರೆ : ಆರಗ ಜ್ಞಾನೇಂದ್ರ -Vishwanews24

ಬೆಂಗಳೂರು: ಸೋಮವಾರದಿಂದ 10 ನೇ ತರಗತಿಯವರೆಗೂ ಶಾಲೆಗಳು ಆರಂಭವಾಗುತ್ತದೆ. ಸಾಮಾಜಿಕ ಜಾಲಾತಾಣದಲ್ಲಿ ಪ್ರಚೋದನಾಕಾರಿ ಸಂದೇಶ, ವಿಡಿಯೋ ಹರಿದಾಡದಂತೆ ಕಟ್ಟೆಚ್ಚರ ವಹಿಸಬೇಕಿದ್ದು, ಹೈಕೋರ್ಟ್ ಆದೇಶ ಪಾಲಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜೊತೆ ಮಾತನಾಡಿ ಅವರು, ಸಮಾಜಘಾತುಕ ಶಕ್ತಿಗಳನ್ನು ಗುರುತಿಸಬೇಕು. ಮೇಲಿನ ಆದೇಶಕ್ಕೆ ಕಾಯದೇ ತಕ್ಷಣದ ಕ್ರಮ ಪಾಲಿಸಲು ಆಡಳಿತಕ್ಕೆ ಆದೇಶ ನೀಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸದಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಶಾಲೆಗಳಿಗೆ ಎಸ್ ಪಿ ಭೇಟಿ ನೀಡಬೇಕು. ಪೋಷಕರು,ಶಾಲಾ ಆಡಳಿತ ಮಂಡಳಿ ಜೊತೆ ಜಿಲ್ಲಾಧಿಕಾರಿಗಳು ನಿರಂತರ ಸಭೆ ನಡೆಸಬೇಕು. ಶಾಂತಿಪಾಲನ ಸಭೆ ನಡೆಸಬೇಕು. ಸಣ್ಣ ಘಟನೆಯನ್ನೂ ಗಂಭೀರವಾಗಿ ಪರಿಗಣಿಸಬೇಕು. ಆದ್ಯತೆಯ ಮೇರೆಗೆ ಕಾನೂನು ಕಾಪಾಡಿಕೊಂಡು ಹೋಗಬೇಕು. ಹೊರಗಿನ ಶಕ್ತಿಗಳಿಗೆ ಅವಕಾಶ ಕೊಡಬಾರದು ಎಂದು ತಿಳಿಸಿದರು.

ರಾಜಕೀಯ ಪಕ್ಷಗಳು,ಧಾರ್ಮಿಕ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿ ಸಭೆ ನಡೆಸಬೇಕು. ಮಾಧ್ಯಮಗಳು ವಸ್ತುಸ್ಥಿತಿಯನ್ನು ವಿವರಿಸುವ ಕೆಲಸ ಮಾಡಬೇಕು ಎಂದ ಅವರು ಮಂಡ್ಯ ಯುವತಿಗೆ ಮಹಾರಾಷ್ಟ್ರ ಶಾಸಕ ಉಡುಗೊರೆ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದರು. ಈ ಬಗ್ಗೆ ಗಮನಿಸುತ್ತಿದ್ದೇವೆ. ಮಂಡ್ಯದ ಯುವತಿ ಮಾತ್ರವಲ್ಲ. ರಾಜ್ಯದ ಕೆಲವು ಮಕ್ಕಳ ಪೋಷಕರು ಮತೀಯ ಸಂಘಟನೆಯಲ್ಲಿದ್ದಾರೆ ಎಂಬ ಮಾಹಿತಿ ಇದೆ. ಆ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದರು.

ಸಭೆಯಲ್ಲಿ ಸಚಿವರಾದ ಬಿ.ಸಿ. ನಾಗೇಶ್, ಅಶ್ವತ್ಥ ನಾರಯಣ್, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago