Featured

ಹಿಜಾಬ್ ವಿವಾದ: ರಾಜ್ಯದ ಕೆಲವು ಮಕ್ಕಳ ಪೋಷಕರು ಮತೀಯ ಸಂಘಟನೆಯಲ್ಲಿದ್ದಾರೆ : ಆರಗ ಜ್ಞಾನೇಂದ್ರ -Vishwanews24

ಹಿಜಾಬ್ ವಿವಾದ: ರಾಜ್ಯದ ಕೆಲವು ಮಕ್ಕಳ ಪೋಷಕರು ಮತೀಯ ಸಂಘಟನೆಯಲ್ಲಿದ್ದಾರೆ : ಆರಗ ಜ್ಞಾನೇಂದ್ರ -Vishwanews24

ಬೆಂಗಳೂರು: ಸೋಮವಾರದಿಂದ 10 ನೇ ತರಗತಿಯವರೆಗೂ ಶಾಲೆಗಳು ಆರಂಭವಾಗುತ್ತದೆ. ಸಾಮಾಜಿಕ ಜಾಲಾತಾಣದಲ್ಲಿ ಪ್ರಚೋದನಾಕಾರಿ ಸಂದೇಶ, ವಿಡಿಯೋ ಹರಿದಾಡದಂತೆ ಕಟ್ಟೆಚ್ಚರ ವಹಿಸಬೇಕಿದ್ದು, ಹೈಕೋರ್ಟ್ ಆದೇಶ ಪಾಲಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜೊತೆ ಮಾತನಾಡಿ ಅವರು, ಸಮಾಜಘಾತುಕ ಶಕ್ತಿಗಳನ್ನು ಗುರುತಿಸಬೇಕು. ಮೇಲಿನ ಆದೇಶಕ್ಕೆ ಕಾಯದೇ ತಕ್ಷಣದ ಕ್ರಮ ಪಾಲಿಸಲು ಆಡಳಿತಕ್ಕೆ ಆದೇಶ ನೀಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸದಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಶಾಲೆಗಳಿಗೆ ಎಸ್ ಪಿ ಭೇಟಿ ನೀಡಬೇಕು. ಪೋಷಕರು,ಶಾಲಾ ಆಡಳಿತ ಮಂಡಳಿ ಜೊತೆ ಜಿಲ್ಲಾಧಿಕಾರಿಗಳು ನಿರಂತರ ಸಭೆ ನಡೆಸಬೇಕು. ಶಾಂತಿಪಾಲನ ಸಭೆ ನಡೆಸಬೇಕು. ಸಣ್ಣ ಘಟನೆಯನ್ನೂ ಗಂಭೀರವಾಗಿ ಪರಿಗಣಿಸಬೇಕು. ಆದ್ಯತೆಯ ಮೇರೆಗೆ ಕಾನೂನು ಕಾಪಾಡಿಕೊಂಡು ಹೋಗಬೇಕು. ಹೊರಗಿನ ಶಕ್ತಿಗಳಿಗೆ ಅವಕಾಶ ಕೊಡಬಾರದು ಎಂದು ತಿಳಿಸಿದರು.

ರಾಜಕೀಯ ಪಕ್ಷಗಳು,ಧಾರ್ಮಿಕ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿ ಸಭೆ ನಡೆಸಬೇಕು. ಮಾಧ್ಯಮಗಳು ವಸ್ತುಸ್ಥಿತಿಯನ್ನು ವಿವರಿಸುವ ಕೆಲಸ ಮಾಡಬೇಕು ಎಂದ ಅವರು ಮಂಡ್ಯ ಯುವತಿಗೆ ಮಹಾರಾಷ್ಟ್ರ ಶಾಸಕ ಉಡುಗೊರೆ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದರು. ಈ ಬಗ್ಗೆ ಗಮನಿಸುತ್ತಿದ್ದೇವೆ. ಮಂಡ್ಯದ ಯುವತಿ ಮಾತ್ರವಲ್ಲ. ರಾಜ್ಯದ ಕೆಲವು ಮಕ್ಕಳ ಪೋಷಕರು ಮತೀಯ ಸಂಘಟನೆಯಲ್ಲಿದ್ದಾರೆ ಎಂಬ ಮಾಹಿತಿ ಇದೆ. ಆ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದರು.

ಸಭೆಯಲ್ಲಿ ಸಚಿವರಾದ ಬಿ.ಸಿ. ನಾಗೇಶ್, ಅಶ್ವತ್ಥ ನಾರಯಣ್, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

22 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

23 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

23 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

24 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

24 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago