Featured

ಹಿಜಾಬ್ ವಿವಾದ : ಸುಪ್ರೀಂ​ ತೀರ್ಪನ್ನು ಸ್ವಾಗತಿಸುತ್ತೇವೆ ; ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಯಮ ಯಥಾಸ್ಥಿತಿ : ಶಿಕ್ಷಣ ಸಚಿವ ಬಿಸಿ ನಾಗೇಶ್

ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ ತೀರ್ಪನ್ನು ಸ್ವಾಗತಿಸುತ್ತೇವೆ; ಧಾರ್ಮಿಕ ಆಚರಣೆಗೆ ಶಾಲೆಗಳಲ್ಲಿ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್

ಬೆಂಗಳೂರು: ಸುಪ್ರೀಂಕೋರ್ಟ್​ ತೀರ್ಪನ್ನು ಸ್ವಾಗತಿಸುತ್ತೇವೆ. ಪ್ರಪಂಚದ ಎಲ್ಲೆಡೆ ಸ್ತ್ರೀಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ಒಳ್ಳೇ ತೀರ್ಪು ಬರುತ್ತೆ ಎನ್ನುವ ನಿರೀಕ್ಷೆ ಸರ್ಕಾರಕ್ಕೆ ಇತ್ತು. ಆದರೆ ಇದು ವಿಭಜಿತ ತೀರ್ಪು ಬಂದಿದೆ. ಮುಂದಿನ ತೀರ್ಪಿಗೆ ಸರ್ಕಾರ ಕಾಯುತ್ತೆ. ಹೈಕೋರ್ಟ್​ ತೀರ್ಪಿಗೆ ಸರ್ಕಾರ ಕಾಯುತ್ತೆ. ಸರ್ಕಾರದ ಶಿಕ್ಷಣ ಕಾಯ್ದೆಯ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ. ಸರ್ಕಾರಿ ಮತ್ತು ಎಲ್ಲ ಶಾಲೆಗಳು ಅದೇ ಕಾಯ್ದೆಯ ಪ್ರಕಾರ ನಡೆಯುತ್ತೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.

ಕರ್ನಾಟಕ ಹಿಜಾಬ್ ಸಂಬಂಧ ಸುಪ್ರೀಂಕೋರ್ಟ್​ ತೀರ್ಪು ಪ್ರಕಟವಾದ ನಂತರ ಇದಕ್ಕೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಮುಂದುವರಿಯುತ್ತದೆ. ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಆಚರಣೆ, ಚಿಹ್ನೆಗಳ ಪ್ರದರ್ಶನ ಸಲ್ಲದು ಎಂದು ಸರ್ಕಾರದ ನಿಲುವು ಪುನರುಚ್ಚರಿಸಿದರು. ಇದನ್ನೂ ಓದಿ: ಮಣಿಪಾಲ: ಅಪಘಾತದಲ್ಲಿ ವಿದ್ಯಾರ್ಥಿಯ ಮೆದುಳು ನಿಷ್ಕ್ರೀಯ.. ಅಂಗಾಂಗ ದಾನದ ಮೂಲಕ ಸಾರ್ಥಕತೆ ಮೆರೆದ ಎಂ ಐ ಟಿ ವಿದ್ಯಾರ್ಥಿ – Vishwanews24

ವಿಶ್ವದಾದ್ಯಂತ ಮಹಿಳೆಯರು ಹಿಜಾಬ್ ವಿರುದ್ಧ ಬೀದಿಗಿಳಿದಿದ್ದಾರೆ. ಇರಾನ್​ನಂಥ ಇಸ್ಲಾಮಿಕ್ ದೇಶಗಳಲ್ಲಿಯೇ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ತೀರ್ಪು ಸಹ ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿಯಬಹುದು ಎಂದು ನಿರೀಕ್ಷಿಸಿದ್ದೆ. ಹಾಗೆಂದು ನಾನು ಸುಪ್ರೀಂಕೋರ್ಟ್ ವಿರುದ್ಧ ಮಾತನಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಹಿಜಾಬ್ ಕುರಿತು ನಮ್ಮ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯು ಊರ್ಜಿತದಲ್ಲಿ ಇರುತ್ತದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago