Featured

ಹಿಜಾಬ್ ವಿವಾದ : ಸುಪ್ರೀಂ​ ತೀರ್ಪನ್ನು ಸ್ವಾಗತಿಸುತ್ತೇವೆ ; ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಯಮ ಯಥಾಸ್ಥಿತಿ : ಶಿಕ್ಷಣ ಸಚಿವ ಬಿಸಿ ನಾಗೇಶ್

ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ ತೀರ್ಪನ್ನು ಸ್ವಾಗತಿಸುತ್ತೇವೆ; ಧಾರ್ಮಿಕ ಆಚರಣೆಗೆ ಶಾಲೆಗಳಲ್ಲಿ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್

ಬೆಂಗಳೂರು: ಸುಪ್ರೀಂಕೋರ್ಟ್​ ತೀರ್ಪನ್ನು ಸ್ವಾಗತಿಸುತ್ತೇವೆ. ಪ್ರಪಂಚದ ಎಲ್ಲೆಡೆ ಸ್ತ್ರೀಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ಒಳ್ಳೇ ತೀರ್ಪು ಬರುತ್ತೆ ಎನ್ನುವ ನಿರೀಕ್ಷೆ ಸರ್ಕಾರಕ್ಕೆ ಇತ್ತು. ಆದರೆ ಇದು ವಿಭಜಿತ ತೀರ್ಪು ಬಂದಿದೆ. ಮುಂದಿನ ತೀರ್ಪಿಗೆ ಸರ್ಕಾರ ಕಾಯುತ್ತೆ. ಹೈಕೋರ್ಟ್​ ತೀರ್ಪಿಗೆ ಸರ್ಕಾರ ಕಾಯುತ್ತೆ. ಸರ್ಕಾರದ ಶಿಕ್ಷಣ ಕಾಯ್ದೆಯ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ. ಸರ್ಕಾರಿ ಮತ್ತು ಎಲ್ಲ ಶಾಲೆಗಳು ಅದೇ ಕಾಯ್ದೆಯ ಪ್ರಕಾರ ನಡೆಯುತ್ತೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.

ಕರ್ನಾಟಕ ಹಿಜಾಬ್ ಸಂಬಂಧ ಸುಪ್ರೀಂಕೋರ್ಟ್​ ತೀರ್ಪು ಪ್ರಕಟವಾದ ನಂತರ ಇದಕ್ಕೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಮುಂದುವರಿಯುತ್ತದೆ. ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಆಚರಣೆ, ಚಿಹ್ನೆಗಳ ಪ್ರದರ್ಶನ ಸಲ್ಲದು ಎಂದು ಸರ್ಕಾರದ ನಿಲುವು ಪುನರುಚ್ಚರಿಸಿದರು. ಇದನ್ನೂ ಓದಿ: ಮಣಿಪಾಲ: ಅಪಘಾತದಲ್ಲಿ ವಿದ್ಯಾರ್ಥಿಯ ಮೆದುಳು ನಿಷ್ಕ್ರೀಯ.. ಅಂಗಾಂಗ ದಾನದ ಮೂಲಕ ಸಾರ್ಥಕತೆ ಮೆರೆದ ಎಂ ಐ ಟಿ ವಿದ್ಯಾರ್ಥಿ – Vishwanews24

ವಿಶ್ವದಾದ್ಯಂತ ಮಹಿಳೆಯರು ಹಿಜಾಬ್ ವಿರುದ್ಧ ಬೀದಿಗಿಳಿದಿದ್ದಾರೆ. ಇರಾನ್​ನಂಥ ಇಸ್ಲಾಮಿಕ್ ದೇಶಗಳಲ್ಲಿಯೇ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ತೀರ್ಪು ಸಹ ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿಯಬಹುದು ಎಂದು ನಿರೀಕ್ಷಿಸಿದ್ದೆ. ಹಾಗೆಂದು ನಾನು ಸುಪ್ರೀಂಕೋರ್ಟ್ ವಿರುದ್ಧ ಮಾತನಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಹಿಜಾಬ್ ಕುರಿತು ನಮ್ಮ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯು ಊರ್ಜಿತದಲ್ಲಿ ಇರುತ್ತದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

Vishwa News 24

Recent Posts

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 minutes ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

26 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago