Featured

ಹಿಜಾಬ್ ವಿವಾದ : ಸುಪ್ರೀಂ​ ತೀರ್ಪನ್ನು ಸ್ವಾಗತಿಸುತ್ತೇವೆ ; ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಯಮ ಯಥಾಸ್ಥಿತಿ : ಶಿಕ್ಷಣ ಸಚಿವ ಬಿಸಿ ನಾಗೇಶ್

ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ ತೀರ್ಪನ್ನು ಸ್ವಾಗತಿಸುತ್ತೇವೆ; ಧಾರ್ಮಿಕ ಆಚರಣೆಗೆ ಶಾಲೆಗಳಲ್ಲಿ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್

ಬೆಂಗಳೂರು: ಸುಪ್ರೀಂಕೋರ್ಟ್​ ತೀರ್ಪನ್ನು ಸ್ವಾಗತಿಸುತ್ತೇವೆ. ಪ್ರಪಂಚದ ಎಲ್ಲೆಡೆ ಸ್ತ್ರೀಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ಒಳ್ಳೇ ತೀರ್ಪು ಬರುತ್ತೆ ಎನ್ನುವ ನಿರೀಕ್ಷೆ ಸರ್ಕಾರಕ್ಕೆ ಇತ್ತು. ಆದರೆ ಇದು ವಿಭಜಿತ ತೀರ್ಪು ಬಂದಿದೆ. ಮುಂದಿನ ತೀರ್ಪಿಗೆ ಸರ್ಕಾರ ಕಾಯುತ್ತೆ. ಹೈಕೋರ್ಟ್​ ತೀರ್ಪಿಗೆ ಸರ್ಕಾರ ಕಾಯುತ್ತೆ. ಸರ್ಕಾರದ ಶಿಕ್ಷಣ ಕಾಯ್ದೆಯ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ. ಸರ್ಕಾರಿ ಮತ್ತು ಎಲ್ಲ ಶಾಲೆಗಳು ಅದೇ ಕಾಯ್ದೆಯ ಪ್ರಕಾರ ನಡೆಯುತ್ತೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.

ಕರ್ನಾಟಕ ಹಿಜಾಬ್ ಸಂಬಂಧ ಸುಪ್ರೀಂಕೋರ್ಟ್​ ತೀರ್ಪು ಪ್ರಕಟವಾದ ನಂತರ ಇದಕ್ಕೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಮುಂದುವರಿಯುತ್ತದೆ. ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಧಾರ್ಮಿಕ ಆಚರಣೆ, ಚಿಹ್ನೆಗಳ ಪ್ರದರ್ಶನ ಸಲ್ಲದು ಎಂದು ಸರ್ಕಾರದ ನಿಲುವು ಪುನರುಚ್ಚರಿಸಿದರು. ಇದನ್ನೂ ಓದಿ: ಮಣಿಪಾಲ: ಅಪಘಾತದಲ್ಲಿ ವಿದ್ಯಾರ್ಥಿಯ ಮೆದುಳು ನಿಷ್ಕ್ರೀಯ.. ಅಂಗಾಂಗ ದಾನದ ಮೂಲಕ ಸಾರ್ಥಕತೆ ಮೆರೆದ ಎಂ ಐ ಟಿ ವಿದ್ಯಾರ್ಥಿ – Vishwanews24

ವಿಶ್ವದಾದ್ಯಂತ ಮಹಿಳೆಯರು ಹಿಜಾಬ್ ವಿರುದ್ಧ ಬೀದಿಗಿಳಿದಿದ್ದಾರೆ. ಇರಾನ್​ನಂಥ ಇಸ್ಲಾಮಿಕ್ ದೇಶಗಳಲ್ಲಿಯೇ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ತೀರ್ಪು ಸಹ ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿಯಬಹುದು ಎಂದು ನಿರೀಕ್ಷಿಸಿದ್ದೆ. ಹಾಗೆಂದು ನಾನು ಸುಪ್ರೀಂಕೋರ್ಟ್ ವಿರುದ್ಧ ಮಾತನಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಹಿಜಾಬ್ ಕುರಿತು ನಮ್ಮ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯು ಊರ್ಜಿತದಲ್ಲಿ ಇರುತ್ತದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

7 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

7 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

10 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

10 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

10 hours ago