Featured

ಹಿಜಾಬ್ ಹೋರಾಟಗಾರ್ತಿಯರು ಈ ನೆಲದ ನಿಯಮ ಮೀರಿ ಮನ ಬಂದಂತೆ ನಡೆದುಕೊಳ್ಳುತ್ತಿದ್ದಾರೆ : ಶೋಭಾ ಕರಂದ್ಲಾಜೆ – Vishwanews24

ಕೋರ್ಟ್ ಗೆ ಸರಕಾರಕ್ಕೆ ಪೊಲೀಸ್ ವ್ಯವಸ್ಥೆಗೆ ಗೌರವ ಕೊಡದಿರುವುದು ಅವರ ಮಾನಸಿಕತೆಯನ್ನು ತೋರಿಸುತ್ತದೆ..

ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸೋದಕ್ಕೆ ಹೊರಟಿದ್ದಾರೆ..

ಉಡುಪಿ: ಹೈಕೋರ್ಟ್ ಆದೇಶವಿದ್ದರೂ ಹಿಜಾಬ್ ಹೋರಾಟಗಾರ್ತಿಯರು ಈ ನೆಲದ ನಿಯಮ ಮೀರಿ ಮನ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಕೋರ್ಟ್, ಸರ್ಕಾರ, ಪೊಲೀಸ್ ವ್ಯವಸ್ಥೆಗೆ ಗೌರವ ನೀಡದಿರುವುದು ಅವರ ಮಾನಸಿಕತೆಯನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಗಳನ್ನು ಧರಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ಸ್ಪಷ್ಟ ನಿರ್ಧಾರ ಕೊಟ್ಟಿದೆ. ರಾಜ್ಯ ಶಿಕ್ಷಣ ಇಲಾಖೆ ಕೂಡ ಸಮವಸ್ತ್ರ ಕಡ್ಡಾಯ ಮಾಡಿ ಆದೇಶಿಸಿದೆ. ಆದಾಗ್ಯೂ ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಗೆ ಬೆಂಬಲ ನೀಡುತ್ತಿರುವುದು, ಕೋರ್ಟ್ ಗೆ ಸರಕಾರಕ್ಕೆ ಪೊಲೀಸ್ ವ್ಯವಸ್ಥೆಗೆ ಗೌರವ ಕೊಡದಿರುವುದು ಅವರ ಮಾನಸಿಕತೆಯನ್ನು ತೋರಿಸುತ್ತದೆ ಎಂದರು.

ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸೋದಕ್ಕೆ ಹೊರಟಿದ್ದಾರೆ. ಭಾರತದಲ್ಲಿ ಎಲ್ಲರೂ ಒಂದೇ ರೀತಿ ಬದುಕಬೇಕು ಎಂದು ನಾವು ಬಯಸುತ್ತಿದ್ದೇವೆ. ಭಾರತವನ್ನು ಬಿಟ್ಟು ಹೋದ ಹಿಂದುಗಳ , ಅಲ್ಪಸಂಖ್ಯಾತರ ಪರಿಸ್ಥಿತಿ ಹೇಗಾಗಿದೆ ಎಂದು ಈಗ ನೋಡಬಹುದು.ಊಟಕ್ಕೂ ಗತಿಯಿಲ್ಲದಂತಾಗಿದೆ. ಏಕತೆ ಇಲ್ಲ, ಭಾರತದಲ್ಲಿ ಎಲ್ಲರಿಗೂ ಊಟ ಕೊಟ್ಟು, ವಿದ್ಯೆ ಕೊಟ್ಟು, ಔಷಧಿ ನೀಡಿ ಸಲಹುತ್ತಿದೆ. ಇದು ದೇಶಕ್ಕೆ, ಪ್ರಪಂಚಕ್ಕೆ ನೀಡುತ್ತಿರುವ ಸಂದೇಶವಾಗಿದೆ ಎಂದರು.

ಹೆಣ್ಣು ಮಕ್ಕಳಿಗೆ ಗೌರವ ಸಿಗುವುದರೊಂದಿಗೆ ವಿದ್ಯೆ ಪಡೆದು ಸ್ವತಂತ್ರ್ಯವಾಗಿ ಬಾಳಬೇಕು ಎಂಬುದು ನಮ್ಮ ಅಪೇಕ್ಷೆ. ಕೇವಲ ಹಿಜಾಬ್ ವಿಚಾರಕ್ಕೆ ಹಾಲ್ ಟಿಕೆಟ್ ಪಡೆದುಕೊಂಡು ಮಾಧ್ಯಮದಲ್ಲಿ ಪ್ರಚಾರ ಮಾಡುತ್ತಾ ಇತರ ದೇಶಗಳಲ್ಲಿಯೂ ಚರ್ಚಿಸುವಂತೆ ಮಾಡುವುದು ಸರಿಯಲ್ಲ. ಭಾರತದಲ್ಲಿ ಏನೋ ಆಗಿದೆ ಎಂಬ ರೀತಿಯಲ್ಲಿ ಬಿಂಬಿಸುವುದು, ಇನ್ಯಾವುದೋ ಭಯೋತ್ಪಾದನೆ ಸಂಘಟನೆ ಬೆಂಬಲ ಮಾಡುವ ರೀತಿಯಲ್ಲಿ ತೋರಿಸುವುದು ನಡೆಯುತ್ತಿದೆ. ಆ ಮಕ್ಕಳು ಪರೀಕ್ಷೆ ಬರೆದು ಪದವಿ ಪಡೆದು ಸ್ವತಂತ್ರವಾಗಿ ತಮ್ಮ ಕಾಲ ಮೇಲೆ ನಿಲ್ಲುವಂತೆ ಆಗಬೇಕು ಎಂಬುದು ನಮ್ಮ ಅಪೇಕ್ಷೆ ಎಂದವರು ತಿಳಿಸಿದರು.

 

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

5 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

5 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

7 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

7 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

10 hours ago