ಉಡುಪಿ: ಹೈಕೋರ್ಟ್ ಆದೇಶವಿದ್ದರೂ ಹಿಜಾಬ್ ಹೋರಾಟಗಾರ್ತಿಯರು ಈ ನೆಲದ ನಿಯಮ ಮೀರಿ ಮನ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಕೋರ್ಟ್, ಸರ್ಕಾರ, ಪೊಲೀಸ್ ವ್ಯವಸ್ಥೆಗೆ ಗೌರವ ನೀಡದಿರುವುದು ಅವರ ಮಾನಸಿಕತೆಯನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಗಳನ್ನು ಧರಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ಸ್ಪಷ್ಟ ನಿರ್ಧಾರ ಕೊಟ್ಟಿದೆ. ರಾಜ್ಯ ಶಿಕ್ಷಣ ಇಲಾಖೆ ಕೂಡ ಸಮವಸ್ತ್ರ ಕಡ್ಡಾಯ ಮಾಡಿ ಆದೇಶಿಸಿದೆ. ಆದಾಗ್ಯೂ ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಗೆ ಬೆಂಬಲ ನೀಡುತ್ತಿರುವುದು, ಕೋರ್ಟ್ ಗೆ ಸರಕಾರಕ್ಕೆ ಪೊಲೀಸ್ ವ್ಯವಸ್ಥೆಗೆ ಗೌರವ ಕೊಡದಿರುವುದು ಅವರ ಮಾನಸಿಕತೆಯನ್ನು ತೋರಿಸುತ್ತದೆ ಎಂದರು.
ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸೋದಕ್ಕೆ ಹೊರಟಿದ್ದಾರೆ. ಭಾರತದಲ್ಲಿ ಎಲ್ಲರೂ ಒಂದೇ ರೀತಿ ಬದುಕಬೇಕು ಎಂದು ನಾವು ಬಯಸುತ್ತಿದ್ದೇವೆ. ಭಾರತವನ್ನು ಬಿಟ್ಟು ಹೋದ ಹಿಂದುಗಳ , ಅಲ್ಪಸಂಖ್ಯಾತರ ಪರಿಸ್ಥಿತಿ ಹೇಗಾಗಿದೆ ಎಂದು ಈಗ ನೋಡಬಹುದು.ಊಟಕ್ಕೂ ಗತಿಯಿಲ್ಲದಂತಾಗಿದೆ. ಏಕತೆ ಇಲ್ಲ, ಭಾರತದಲ್ಲಿ ಎಲ್ಲರಿಗೂ ಊಟ ಕೊಟ್ಟು, ವಿದ್ಯೆ ಕೊಟ್ಟು, ಔಷಧಿ ನೀಡಿ ಸಲಹುತ್ತಿದೆ. ಇದು ದೇಶಕ್ಕೆ, ಪ್ರಪಂಚಕ್ಕೆ ನೀಡುತ್ತಿರುವ ಸಂದೇಶವಾಗಿದೆ ಎಂದರು.
ಹೆಣ್ಣು ಮಕ್ಕಳಿಗೆ ಗೌರವ ಸಿಗುವುದರೊಂದಿಗೆ ವಿದ್ಯೆ ಪಡೆದು ಸ್ವತಂತ್ರ್ಯವಾಗಿ ಬಾಳಬೇಕು ಎಂಬುದು ನಮ್ಮ ಅಪೇಕ್ಷೆ. ಕೇವಲ ಹಿಜಾಬ್ ವಿಚಾರಕ್ಕೆ ಹಾಲ್ ಟಿಕೆಟ್ ಪಡೆದುಕೊಂಡು ಮಾಧ್ಯಮದಲ್ಲಿ ಪ್ರಚಾರ ಮಾಡುತ್ತಾ ಇತರ ದೇಶಗಳಲ್ಲಿಯೂ ಚರ್ಚಿಸುವಂತೆ ಮಾಡುವುದು ಸರಿಯಲ್ಲ. ಭಾರತದಲ್ಲಿ ಏನೋ ಆಗಿದೆ ಎಂಬ ರೀತಿಯಲ್ಲಿ ಬಿಂಬಿಸುವುದು, ಇನ್ಯಾವುದೋ ಭಯೋತ್ಪಾದನೆ ಸಂಘಟನೆ ಬೆಂಬಲ ಮಾಡುವ ರೀತಿಯಲ್ಲಿ ತೋರಿಸುವುದು ನಡೆಯುತ್ತಿದೆ. ಆ ಮಕ್ಕಳು ಪರೀಕ್ಷೆ ಬರೆದು ಪದವಿ ಪಡೆದು ಸ್ವತಂತ್ರವಾಗಿ ತಮ್ಮ ಕಾಲ ಮೇಲೆ ನಿಲ್ಲುವಂತೆ ಆಗಬೇಕು ಎಂಬುದು ನಮ್ಮ ಅಪೇಕ್ಷೆ ಎಂದವರು ತಿಳಿಸಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…