ಶಿಮ್ಲಾ :ಹಿಮಾಚಲ ಪ್ರದೇಶ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಿನ್ನಲೆ ಇದೀಗ ಎಲ್ಲಾ ರಾಜ್ಯ ಸಚಿವರು, ಮುಖ್ಯ ಸಂಸದೀಯ ಕಾರ್ಯದರ್ಶಿಗಳು ಮತ್ತು ಕ್ಯಾಬಿನೆಟ್ ದರ್ಜೆಯ ಸದಸ್ಯರಿಗೆ 2 ತಿಂಗಳ ವರೆಗೆ ಯಾವುದೇ ವೇತನ ಹಾಗೂ ಭತ್ಯೆ ನೀಡಲಾಗುವುದಿಲ್ಲ ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯವು ಉತ್ತಮ ಸುಧಾರಣೆ ಕಾಣಬೇಕಿದೆ. ಆದ್ದರಿಂದ ಮುಂದಿನ 2 ತಿಂಗಳು ಯಾವುದೇ ಸಂಬಳ, ಟಿಎ, ಡಿಎ ತೆಗೆದುಕೊಳ್ಳುವುದಿಲ್ಲ ಅಂತ ಸಂಪುಟದ ಎಲ್ಲಾ ಸದಸ್ಯರು ನಿರ್ಧಸಿರುವುದಾಗಿ ಸಿಎಂ ತಿಳಿಸಿದ್ದಾರೆ.
ಅಲ್ಲದೇ ವೇತನ ಉಳಿತಾಯವು ಒಂದು ಸಣ್ಣ ಮೊತ್ತವಾಗಿದೆ. ಇದರ ಹೊರತಾಗಿ ಎಲ್ಲಾ ಶಾಸಕರು ಸಹ ಕೊಡುಗೆ ನೀಡಬೇಕೆಂದು ನಾನು ವಿನಂತಿಸುತ್ತೇನೆ ಎಂದೂ ಸಹ ಅವರು ಮನವಿ ಮಾಡಿದ್ದಾರೆ.
ಹಳೆಯ ಪಿಂಚಣಿ ಯೋಜನೆ , ಮಹಿಳೆಯರಿಗೆ 1,500 ರೂ. ಪಾವತಿಸುವ ಗ್ಯಾರಂಟಿ ಯೋಜನೆ, ಉಚಿತ ವಿದ್ಯುತ್ ಈ ಯೋಜನೆಗಳಿಂದಾಗಿ 86,589 ಕೋಟಿ ರೂ. ಸಾಲದ ಹೊರೆಯಾಗಿದೆ ಎಂದು ವರದಿಯಾಗಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…