Featured

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ನದಿ ನೀರಿನಲ್ಲಿ ಕೊಚ್ಚಿ ಹೋದ ಬಸ್ (ವಿಡಿಯೊ)

ಶಿಮ್ಲಾ: ಕೇರಳ, ಈಶಾನ್ಯ ಭಾರತ ಆಯ್ತು ಇದೀಗ ಹಿಮಾಚಲ ಪ್ರದೇಶದಲ್ಲಿ ವರುಣರಾಯ ರೌದ್ರಾವತಾರ ತೋರುತ್ತಿದ್ದಾನೆ. ಭಾರಿ ಮಳೆಗೆ ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಮನಾಲಿ ಅಕ್ಷರಶಃ ತತ್ತರಿಸಿ ಹೋಗಿದೆ.

ಮನಾಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 127.4 ಮಿ.ಮೀ. ಮಳೆಯಾಗಿದೆ. ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮನಾಲಿ ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿದೆ. ಅಲ್ಲದೆ ಭಾರಿ ಮಳೆಗೆ ಭೂಕುಸಿತ ಉಂಟಾಗಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಬಿಯಾಸ್ ನದಿ ತುಂಬಿ ಹರಿಯುತ್ತಿದ್ದು, ದಡದಲ್ಲಿ ನಿಂತಿದ್ದ ಟೂರಿಸ್ಟ್ ಬಸ್ ಒಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಈ ದೃಶ್ಯ ಕ್ಯಾಮರಾಗಳಲ್ಲಿ ಸೆರೆಯಾಗಿದೆ.

ಅದೃಷ್ಟವಶಾತ್ ಬಸ್ ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲವಾದ್ದರಿಂದ ನಡೆಯಬಹುದಾಗಿದ್ದ ಭಾರಿ ದುರಂತವೊಂದು ತಪ್ಪಿದೆ. ಇನ್ನು ಕೆಲವು ಟ್ರಕ್​​ಗಳು ಪ್ರವಾಹದಲ್ಲಿ ಸಿಲುಕಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಬಿಯಾಸ್​ ನದಿಯು ಮಂಡಿ ಜಿಲ್ಲೆಯ ಚಂಡೀಗರ್​-ಮೊನಾಲಿ ರಾಷ್ಟ್ರೀಯ ಹೆದ್ದಾರಿ 21ರಲ್ಲಿ ಅಪಾಯದ ಸುಳಿವು ನೀಡಿದ್ದು, ರಸ್ತೆಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ.

 

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

11 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

12 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

12 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

12 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

12 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

13 hours ago