Featured

ಹಿಮಾಚಲ ಪ್ರದೇಶ: ಕಾಂಗ್ರೆಸ್‌ನ 26 ಮಂದಿ ಮುಖಂಡರು ಬಿಜೆಪಿ ಸೇರ್ಪಡೆ – Vishwanews24

ಹಿಮಾಚಲ ಪ್ರದೇಶ: ಕಾಂಗ್ರೆಸ್‌ನ 26 ಮಂದಿ ಮುಖಂಡರು ಬಿಜೆಪಿ ಸೇರ್ಪಡೆ

ನವದೆಹಲಿ: ಹಿಮಾಚಲಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗಲೇ ಕಾಂಗ್ರೆಸ್‌ಗೆ ಆಘಾತ ಎದುರಾಗಿದೆ. ಕಾಂಗ್ರೆಸ್‌ನ 26 ಮಂದಿ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇನ್ನು ನಾಲ್ಕು ದಿನಗಳಲ್ಲಿ ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕಾಂಗ್ರೆಸ್‌ಗೆ ದೊಡ್ಡ ಆಘಾತ ಎದುರಾಗಿದ್ದು, 26 ಮಂದಿ ಕಾಂಗ್ರೆಸ್ ಮುಖಂಡರು ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುಧಾನ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಶಿಮ್ಲಾದ ಬಿಜೆಪಿ ಅಭ್ಯರ್ಥಿಯಾಗಿರುವ ಸಂಜಯ್ ಸೂದ್ ಕೂಡಾ ಈ ವೇಳೆ ಉಪಸ್ಥಿತರಿದ್ದರು.

ಹಿಂದೂ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ – ನಾನು ಹೇಳಿದ್ದರಲ್ಲಿ ತಪ್ಪಿಲ್ಲ..

ಕಾಂಗ್ರೆಸ್ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಧರ್ಮಪಾಲ್ ಠಾಕೂರ್, ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ ರಾಜನ್ ಠಾಕೂರ್, ಜಿಲ್ಲಾ ಮಾಜಿ ಉಪಾಧ್ಯಕ್ಷ ಅಮಿತ್ ಮೆಹ್ತಾ, ಮೆಹ್ರ ಸಿಂಗ್ ಕನ್ವರ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನೇಗಿ, ಜೈ ಮಾ ಶಕ್ತಿ ಸೋಶಿಯಲ್ ಸಂಸ್ಥಾನದ ಅಧ್ಯಕ್ಷ ಜೋಗಿಂದರ್ ಠಾಕೂರ್, ನರೇಶ್ ವರ್ಮಾ, ಗ್ರಾ.ಪಂ ಸದಸ್ಯ ಯೋಗೇಂದ್ರ ಸಿಂಗ, ಟ್ಯಾಕ್ಸಿ ಯೂನಿಯನ್ ಸದಸ್ಯ ರಾಕೇಶ್ ಚೌಹಾಣ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಆರ್ಟ್ ಆಂಡ್ ಕಲ್ಚರಲ್ ಹೆರಿಟೇಜ್ ಅಧ್ಯಕ್ಷ ಧರ್ಮೇಂದ್ರ ಕುಮಾರ್, ರಾಹುಲ್ ರಾವತ್, ವೀರೇಂದ್ರ ಶರ್ಮಾ, ಸೋನು ಶರ್ಮಾ, ಅರುಣ್ ಕುಮಾರ್, ಶಿವಂ ಕುಮಾರ್ ಮತ್ತು ಗೋಪಾಲ ಠಾಕೂರ್ ಕಮಲ ಪಾಳಯಕ್ಕೆ ಜಿಗಿದವರು ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಮೂಡುಬಿದಿರೆ: ಕಾಲೇಜಿನ ಹಾಸ್ಟೆಲ್‌ ನಲ್ಲಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – Vishwanews24

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago