ನವದೆಹಲಿ: ಹಿಮಾಚಲಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗಲೇ ಕಾಂಗ್ರೆಸ್ಗೆ ಆಘಾತ ಎದುರಾಗಿದೆ. ಕಾಂಗ್ರೆಸ್ನ 26 ಮಂದಿ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಇನ್ನು ನಾಲ್ಕು ದಿನಗಳಲ್ಲಿ ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕಾಂಗ್ರೆಸ್ಗೆ ದೊಡ್ಡ ಆಘಾತ ಎದುರಾಗಿದ್ದು, 26 ಮಂದಿ ಕಾಂಗ್ರೆಸ್ ಮುಖಂಡರು ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುಧಾನ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಶಿಮ್ಲಾದ ಬಿಜೆಪಿ ಅಭ್ಯರ್ಥಿಯಾಗಿರುವ ಸಂಜಯ್ ಸೂದ್ ಕೂಡಾ ಈ ವೇಳೆ ಉಪಸ್ಥಿತರಿದ್ದರು.
ಹಿಂದೂ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ – ನಾನು ಹೇಳಿದ್ದರಲ್ಲಿ ತಪ್ಪಿಲ್ಲ..
ಕಾಂಗ್ರೆಸ್ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಧರ್ಮಪಾಲ್ ಠಾಕೂರ್, ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ ರಾಜನ್ ಠಾಕೂರ್, ಜಿಲ್ಲಾ ಮಾಜಿ ಉಪಾಧ್ಯಕ್ಷ ಅಮಿತ್ ಮೆಹ್ತಾ, ಮೆಹ್ರ ಸಿಂಗ್ ಕನ್ವರ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನೇಗಿ, ಜೈ ಮಾ ಶಕ್ತಿ ಸೋಶಿಯಲ್ ಸಂಸ್ಥಾನದ ಅಧ್ಯಕ್ಷ ಜೋಗಿಂದರ್ ಠಾಕೂರ್, ನರೇಶ್ ವರ್ಮಾ, ಗ್ರಾ.ಪಂ ಸದಸ್ಯ ಯೋಗೇಂದ್ರ ಸಿಂಗ, ಟ್ಯಾಕ್ಸಿ ಯೂನಿಯನ್ ಸದಸ್ಯ ರಾಕೇಶ್ ಚೌಹಾಣ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಆರ್ಟ್ ಆಂಡ್ ಕಲ್ಚರಲ್ ಹೆರಿಟೇಜ್ ಅಧ್ಯಕ್ಷ ಧರ್ಮೇಂದ್ರ ಕುಮಾರ್, ರಾಹುಲ್ ರಾವತ್, ವೀರೇಂದ್ರ ಶರ್ಮಾ, ಸೋನು ಶರ್ಮಾ, ಅರುಣ್ ಕುಮಾರ್, ಶಿವಂ ಕುಮಾರ್ ಮತ್ತು ಗೋಪಾಲ ಠಾಕೂರ್ ಕಮಲ ಪಾಳಯಕ್ಕೆ ಜಿಗಿದವರು ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಮೂಡುಬಿದಿರೆ: ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – Vishwanews24
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…