ನವದೆಹಲಿ: ಹಿಮಾಚಲಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗಲೇ ಕಾಂಗ್ರೆಸ್ಗೆ ಆಘಾತ ಎದುರಾಗಿದೆ. ಕಾಂಗ್ರೆಸ್ನ 26 ಮಂದಿ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಇನ್ನು ನಾಲ್ಕು ದಿನಗಳಲ್ಲಿ ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕಾಂಗ್ರೆಸ್ಗೆ ದೊಡ್ಡ ಆಘಾತ ಎದುರಾಗಿದ್ದು, 26 ಮಂದಿ ಕಾಂಗ್ರೆಸ್ ಮುಖಂಡರು ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುಧಾನ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಶಿಮ್ಲಾದ ಬಿಜೆಪಿ ಅಭ್ಯರ್ಥಿಯಾಗಿರುವ ಸಂಜಯ್ ಸೂದ್ ಕೂಡಾ ಈ ವೇಳೆ ಉಪಸ್ಥಿತರಿದ್ದರು.
ಹಿಂದೂ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ – ನಾನು ಹೇಳಿದ್ದರಲ್ಲಿ ತಪ್ಪಿಲ್ಲ..
ಕಾಂಗ್ರೆಸ್ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಧರ್ಮಪಾಲ್ ಠಾಕೂರ್, ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ ರಾಜನ್ ಠಾಕೂರ್, ಜಿಲ್ಲಾ ಮಾಜಿ ಉಪಾಧ್ಯಕ್ಷ ಅಮಿತ್ ಮೆಹ್ತಾ, ಮೆಹ್ರ ಸಿಂಗ್ ಕನ್ವರ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನೇಗಿ, ಜೈ ಮಾ ಶಕ್ತಿ ಸೋಶಿಯಲ್ ಸಂಸ್ಥಾನದ ಅಧ್ಯಕ್ಷ ಜೋಗಿಂದರ್ ಠಾಕೂರ್, ನರೇಶ್ ವರ್ಮಾ, ಗ್ರಾ.ಪಂ ಸದಸ್ಯ ಯೋಗೇಂದ್ರ ಸಿಂಗ, ಟ್ಯಾಕ್ಸಿ ಯೂನಿಯನ್ ಸದಸ್ಯ ರಾಕೇಶ್ ಚೌಹಾಣ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಆರ್ಟ್ ಆಂಡ್ ಕಲ್ಚರಲ್ ಹೆರಿಟೇಜ್ ಅಧ್ಯಕ್ಷ ಧರ್ಮೇಂದ್ರ ಕುಮಾರ್, ರಾಹುಲ್ ರಾವತ್, ವೀರೇಂದ್ರ ಶರ್ಮಾ, ಸೋನು ಶರ್ಮಾ, ಅರುಣ್ ಕುಮಾರ್, ಶಿವಂ ಕುಮಾರ್ ಮತ್ತು ಗೋಪಾಲ ಠಾಕೂರ್ ಕಮಲ ಪಾಳಯಕ್ಕೆ ಜಿಗಿದವರು ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಮೂಡುಬಿದಿರೆ: ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…