ಉಡುಪಿ : ಚುನಾವಣಾ ನೀತಿ ಸಂಹಿತೆ ಬಿಸಿ ಕೇವಲ ರಾಜಕೀಯ ಪಕ್ಷಕ್ಕೆ ಹಾಗೂ ರಾಜಕಾರಣಿಗಳಿಗೆ ಮಾತ್ರವಲ್ಲ ಜಿಲ್ಲೆಯ ವಿವಿಧ ಧಾರ್ಮಿಕ ಆಚರಣೆಗಳಿಗೂ ತಟ್ಟಿದೆ. ಇತ್ತೀಚೆಗೆ ಯಕ್ಷಗಾನ, ನಾಗಮಂಡಲಗಳಿಗೆ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಹಿನ್ನಲೆಯಲ್ಲಿ ಅಡ್ಡಿಪಡಿಸಿರುವ ಬೆನ್ನಲ್ಲೇ ಇದೀಗ ಹಿರಿಯಡ್ಕದ ವೀರಭದ್ರ ದೇವಾಲಯದ ಬ್ರಹ್ಮಕಲಶೋತ್ಸವ ಬ್ಯಾನರ್ ಗಳನ್ನು ಚುನಾವಣಾಧಿಕಾರಿಗಳು ಬಲವಂತವಾಗಿ ತೆಗೆದುಹಾಕಿದ್ದಾರೆ. ಐನೂರಕ್ಕೂ ಅಧಿಕ ಬ್ಯಾನರ್ ಬಂಟಿಂಗ್ಸ್ ತೆರವು ಮಾಡಿದ ಚುನಾವಣಾಧಿಕಾರಿಗಳು ರಾಜಕೀಯ ರಹಿತ ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವುದಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎ.16 ರಿಂದ 25 ವರೆಗೆ ನಡೆಯ ಲಿರುವ ಬ್ರಹ್ಮ ಕಲಶೋತ್ಸವಕ್ಕೆ ಸಾಕಷ್ಟು ಪ್ರಚಾರದ ಅಗತ್ಯವಿದೆ.
ಕರಾವಳಿ ಮಲೆನಾಡು ಭಾಗದ ಪ್ರಸಿದ್ದ ದೇವಾಲಯವಾದ ಮಹತೋಭಾರ ವೀರಭದ್ರ ದೇವಾಲಯ 28 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರ ಕಂಡಿದ್ದು ಈ ಸಮಯದಲ್ಲೇ ಬ್ಯಾನರ್ ತೆರವು ಮಾಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಭಕ್ತ ಸಮೂಹದಲ್ಲಿ ಉದ್ಘವವಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…