ಉಡುಪಿ : ಚುನಾವಣಾ ನೀತಿ ಸಂಹಿತೆ ಬಿಸಿ ಕೇವಲ ರಾಜಕೀಯ ಪಕ್ಷಕ್ಕೆ ಹಾಗೂ ರಾಜಕಾರಣಿಗಳಿಗೆ ಮಾತ್ರವಲ್ಲ ಜಿಲ್ಲೆಯ ವಿವಿಧ ಧಾರ್ಮಿಕ ಆಚರಣೆಗಳಿಗೂ ತಟ್ಟಿದೆ. ಇತ್ತೀಚೆಗೆ ಯಕ್ಷಗಾನ, ನಾಗಮಂಡಲಗಳಿಗೆ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಹಿನ್ನಲೆಯಲ್ಲಿ ಅಡ್ಡಿಪಡಿಸಿರುವ ಬೆನ್ನಲ್ಲೇ ಇದೀಗ ಹಿರಿಯಡ್ಕದ ವೀರಭದ್ರ ದೇವಾಲಯದ ಬ್ರಹ್ಮಕಲಶೋತ್ಸವ ಬ್ಯಾನರ್ ಗಳನ್ನು ಚುನಾವಣಾಧಿಕಾರಿಗಳು ಬಲವಂತವಾಗಿ ತೆಗೆದುಹಾಕಿದ್ದಾರೆ. ಐನೂರಕ್ಕೂ ಅಧಿಕ ಬ್ಯಾನರ್ ಬಂಟಿಂಗ್ಸ್ ತೆರವು ಮಾಡಿದ ಚುನಾವಣಾಧಿಕಾರಿಗಳು ರಾಜಕೀಯ ರಹಿತ ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವುದಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎ.16 ರಿಂದ 25 ವರೆಗೆ ನಡೆಯ ಲಿರುವ ಬ್ರಹ್ಮ ಕಲಶೋತ್ಸವಕ್ಕೆ ಸಾಕಷ್ಟು ಪ್ರಚಾರದ ಅಗತ್ಯವಿದೆ.
ಕರಾವಳಿ ಮಲೆನಾಡು ಭಾಗದ ಪ್ರಸಿದ್ದ ದೇವಾಲಯವಾದ ಮಹತೋಭಾರ ವೀರಭದ್ರ ದೇವಾಲಯ 28 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರ ಕಂಡಿದ್ದು ಈ ಸಮಯದಲ್ಲೇ ಬ್ಯಾನರ್ ತೆರವು ಮಾಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಭಕ್ತ ಸಮೂಹದಲ್ಲಿ ಉದ್ಘವವಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…