ಉಡುಪಿ

ಹಿರಿಯಡ್ಕ : ಕೊಂಡಾಡಿ ಭಜನೆಕಟ್ಟೆಯ ಶ್ರೀ ರಾಮ ಭಜನಾ ಮಂಡಳಿಯವರಿಂದ ಸುವರ್ಣ ಮಹೋತ್ಸವದ ಪ್ರಯುಕ್ತ “ನೆನೆದವರ ಮನೆಯಲ್ಲಿ ಭಜನೆ” ಕಾರ್ಯಕ್ರಮ” – vishwanews24

ಹಿರಿಯಡ್ಕ : ಕೊಂಡಾಡಿ ಭಜನೆಕಟ್ಟೆಯ ಶ್ರೀ ರಾಮ ಭಜನಾ ಮಂಡಳಿಯವರಿಂದ ಸುವರ್ಣ ಮಹೋತ್ಸವದ ಪ್ರಯುಕ್ತ “ನೆನೆದವರ ಮನೆಯಲ್ಲಿ ಭಜನೆ” ಕಾರ್ಯಕ್ರಮ”

ಹಿರಿಯಡ್ಕ: ಶ್ರೀ ರಾಮ ಭಜನಾ ಮಂಡಳಿ ಭಜನೆಕಟ್ಟೆ ಕೊಂಡಾಡಿಯ ಸುವರ್ಣ ಮಹೋತ್ಸವದ ಅಂಗವಾಗಿ *”ನೆನೆದವರ ಮನೆಯಲ್ಲಿ ಭಜನೆ”* ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಕೇಮಾರು ಮಠ ಇವರಿಂದ ಚಾಲನೆಗೊಂಡು ಭಕ್ತಿಭಾವದಿಂದ ಯಶಸ್ವಿಯಾಗಿ ಮನೆಮಾತಾಗಿ ನಡೆಯುತ್ತಿದೆ.

ಮದುವೆಯ ಮೆಹಂದಿ, ಹುಟ್ಟುಹಬ್ಬ, ಮದುವೆಯ ವಾರ್ಷಿಕೋತ್ಸವ, ಈ ರೀತಿ ಅವರವರ ಇಚ್ಛಾನುಸಾರ ವಿಶೇಷವಾಗಿ ಇಷ್ಟರವರೆಗೆ 60ನೇ ದಿನದ ಭಜನೆಯು ಶ್ರೀ ಆನಂದ ಶೆಟ್ಟಿ ಕೊಂಡಾಡಿ ಇವರ ಮನೆಯಲ್ಲಿ ನಡೆಯಿತು.

ಭಜನೆ ನಡೆದ ಪ್ರತಿ ಮನೆಯವರಿಗೆ ಪುರಂದರದಾಸರ ಒಂದು ಭಜನೆ ಪುಸ್ತಕವನ್ನು ನೀಡಿ ಶ್ರೀ ರಾಮ ಭಜನಾ ಮಂಡಳಿಯ ಸದಸ್ಯರಿಗೆ ಹಾಗೂ ಭಜನಾ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ಭಕ್ತಾದಿಯವರಿಗೆ ಪರಮಾತ್ಮನು ಆಯುರಾರೋಗ್ಯ, ಸಕಲ ಐಶ್ವರ್ಯ, ನೆಮ್ಮದಿ, ಗೌರವವನ್ನು ಕರುಣಿಸಲೆಂದು ಪರಸ್ಪರ ಪ್ರಾರ್ಥಿಸುವುದು ವಾಡಿಕೆಯಾಗಿದೆ. ಇದೇ ರೀತಿ ಮುಂದುವರಿದು ದೇವರನ್ನು ಸಂತ್ರಪ್ತಿ ಪಡಿಸಲು ಇರುವ ಏಕೈಕ ಮಾರ್ಗ ಭಜನೆ ಎಲ್ಲೆಡೆಯೂ ನಡೆಯುತ್ತಿದೆ. ಮುಂದಿನ ಶ್ರೀ ರಾಮ ನವಮಿಯಂದು ನಡೆಯಲಿರುವ ಅಖಂಡ ಏಕಾಹ ಭಜನಾ ಮಂಗಲೋತ್ಸವದ ಸುವರ್ಣ ಮಹೋತ್ಸವಕ್ಕೆ ಎಲ್ಲರೂ ಸಂಪೂರ್ಣ ಸಹಕಾರ ನೀಡಬೇಕೆಂದು ಮಂಡಳಿಯ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

8 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

53 minutes ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago