ಹಿರಿಯಡ್ಕ: ಶ್ರೀ ರಾಮ ಭಜನಾ ಮಂಡಳಿ ಭಜನೆಕಟ್ಟೆ ಕೊಂಡಾಡಿಯ ಸುವರ್ಣ ಮಹೋತ್ಸವದ ಅಂಗವಾಗಿ *”ನೆನೆದವರ ಮನೆಯಲ್ಲಿ ಭಜನೆ”* ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಕೇಮಾರು ಮಠ ಇವರಿಂದ ಚಾಲನೆಗೊಂಡು ಭಕ್ತಿಭಾವದಿಂದ ಯಶಸ್ವಿಯಾಗಿ ಮನೆಮಾತಾಗಿ ನಡೆಯುತ್ತಿದೆ.
ಮದುವೆಯ ಮೆಹಂದಿ, ಹುಟ್ಟುಹಬ್ಬ, ಮದುವೆಯ ವಾರ್ಷಿಕೋತ್ಸವ, ಈ ರೀತಿ ಅವರವರ ಇಚ್ಛಾನುಸಾರ ವಿಶೇಷವಾಗಿ ಇಷ್ಟರವರೆಗೆ 60ನೇ ದಿನದ ಭಜನೆಯು ಶ್ರೀ ಆನಂದ ಶೆಟ್ಟಿ ಕೊಂಡಾಡಿ ಇವರ ಮನೆಯಲ್ಲಿ ನಡೆಯಿತು.
ಭಜನೆ ನಡೆದ ಪ್ರತಿ ಮನೆಯವರಿಗೆ ಪುರಂದರದಾಸರ ಒಂದು ಭಜನೆ ಪುಸ್ತಕವನ್ನು ನೀಡಿ ಶ್ರೀ ರಾಮ ಭಜನಾ ಮಂಡಳಿಯ ಸದಸ್ಯರಿಗೆ ಹಾಗೂ ಭಜನಾ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ಭಕ್ತಾದಿಯವರಿಗೆ ಪರಮಾತ್ಮನು ಆಯುರಾರೋಗ್ಯ, ಸಕಲ ಐಶ್ವರ್ಯ, ನೆಮ್ಮದಿ, ಗೌರವವನ್ನು ಕರುಣಿಸಲೆಂದು ಪರಸ್ಪರ ಪ್ರಾರ್ಥಿಸುವುದು ವಾಡಿಕೆಯಾಗಿದೆ. ಇದೇ ರೀತಿ ಮುಂದುವರಿದು ದೇವರನ್ನು ಸಂತ್ರಪ್ತಿ ಪಡಿಸಲು ಇರುವ ಏಕೈಕ ಮಾರ್ಗ ಭಜನೆ ಎಲ್ಲೆಡೆಯೂ ನಡೆಯುತ್ತಿದೆ. ಮುಂದಿನ ಶ್ರೀ ರಾಮ ನವಮಿಯಂದು ನಡೆಯಲಿರುವ ಅಖಂಡ ಏಕಾಹ ಭಜನಾ ಮಂಗಲೋತ್ಸವದ ಸುವರ್ಣ ಮಹೋತ್ಸವಕ್ಕೆ ಎಲ್ಲರೂ ಸಂಪೂರ್ಣ ಸಹಕಾರ ನೀಡಬೇಕೆಂದು ಮಂಡಳಿಯ ಪ್ರಕಟಣೆ ತಿಳಿಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…