ಉಡುಪಿ

ಹಿರಿಯಡ್ಕ : ಕೊಂಡಾಡಿ ಭಜನೆಕಟ್ಟೆಯ ಶ್ರೀ ರಾಮ ಭಜನಾ ಮಂಡಳಿಯವರಿಂದ ಸುವರ್ಣ ಮಹೋತ್ಸವದ ಪ್ರಯುಕ್ತ “ನೆನೆದವರ ಮನೆಯಲ್ಲಿ ಭಜನೆ” ಕಾರ್ಯಕ್ರಮ” – vishwanews24

ಹಿರಿಯಡ್ಕ : ಕೊಂಡಾಡಿ ಭಜನೆಕಟ್ಟೆಯ ಶ್ರೀ ರಾಮ ಭಜನಾ ಮಂಡಳಿಯವರಿಂದ ಸುವರ್ಣ ಮಹೋತ್ಸವದ ಪ್ರಯುಕ್ತ “ನೆನೆದವರ ಮನೆಯಲ್ಲಿ ಭಜನೆ” ಕಾರ್ಯಕ್ರಮ”

ಹಿರಿಯಡ್ಕ: ಶ್ರೀ ರಾಮ ಭಜನಾ ಮಂಡಳಿ ಭಜನೆಕಟ್ಟೆ ಕೊಂಡಾಡಿಯ ಸುವರ್ಣ ಮಹೋತ್ಸವದ ಅಂಗವಾಗಿ *”ನೆನೆದವರ ಮನೆಯಲ್ಲಿ ಭಜನೆ”* ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಕೇಮಾರು ಮಠ ಇವರಿಂದ ಚಾಲನೆಗೊಂಡು ಭಕ್ತಿಭಾವದಿಂದ ಯಶಸ್ವಿಯಾಗಿ ಮನೆಮಾತಾಗಿ ನಡೆಯುತ್ತಿದೆ.

ಮದುವೆಯ ಮೆಹಂದಿ, ಹುಟ್ಟುಹಬ್ಬ, ಮದುವೆಯ ವಾರ್ಷಿಕೋತ್ಸವ, ಈ ರೀತಿ ಅವರವರ ಇಚ್ಛಾನುಸಾರ ವಿಶೇಷವಾಗಿ ಇಷ್ಟರವರೆಗೆ 60ನೇ ದಿನದ ಭಜನೆಯು ಶ್ರೀ ಆನಂದ ಶೆಟ್ಟಿ ಕೊಂಡಾಡಿ ಇವರ ಮನೆಯಲ್ಲಿ ನಡೆಯಿತು.

ಭಜನೆ ನಡೆದ ಪ್ರತಿ ಮನೆಯವರಿಗೆ ಪುರಂದರದಾಸರ ಒಂದು ಭಜನೆ ಪುಸ್ತಕವನ್ನು ನೀಡಿ ಶ್ರೀ ರಾಮ ಭಜನಾ ಮಂಡಳಿಯ ಸದಸ್ಯರಿಗೆ ಹಾಗೂ ಭಜನಾ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ಭಕ್ತಾದಿಯವರಿಗೆ ಪರಮಾತ್ಮನು ಆಯುರಾರೋಗ್ಯ, ಸಕಲ ಐಶ್ವರ್ಯ, ನೆಮ್ಮದಿ, ಗೌರವವನ್ನು ಕರುಣಿಸಲೆಂದು ಪರಸ್ಪರ ಪ್ರಾರ್ಥಿಸುವುದು ವಾಡಿಕೆಯಾಗಿದೆ. ಇದೇ ರೀತಿ ಮುಂದುವರಿದು ದೇವರನ್ನು ಸಂತ್ರಪ್ತಿ ಪಡಿಸಲು ಇರುವ ಏಕೈಕ ಮಾರ್ಗ ಭಜನೆ ಎಲ್ಲೆಡೆಯೂ ನಡೆಯುತ್ತಿದೆ. ಮುಂದಿನ ಶ್ರೀ ರಾಮ ನವಮಿಯಂದು ನಡೆಯಲಿರುವ ಅಖಂಡ ಏಕಾಹ ಭಜನಾ ಮಂಗಲೋತ್ಸವದ ಸುವರ್ಣ ಮಹೋತ್ಸವಕ್ಕೆ ಎಲ್ಲರೂ ಸಂಪೂರ್ಣ ಸಹಕಾರ ನೀಡಬೇಕೆಂದು ಮಂಡಳಿಯ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago