ಹಿರಿಯಡ್ಕ: ಬುಧವಾರ ಜಾನುವಾರು ವ್ಯಾಪರಿ ಹುಸೇನಬ್ಬ(61) ಸಂಶಯಾಸ್ಪದ ಸಾವಿನ ಪ್ರಕರಣದ ಹಿನ್ನಲೆ ಕರ್ತವ್ಯ ಲೋಪದಡಿಯಲ್ಲಿ ಹಿರಿಯಡ್ಕ ಠಾಣೆಯ ಸಬ್ ಇನ್ಸ್ ಪೆಕ್ಟರ್ ಡಿ.ಎನ್ ಕುಮಾರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ಕೈಗೊಂಡ ಬಗ್ಗೆ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್, ಜೀಪ್ ಡ್ರೈವರ್ ಗೋಪಾಲ್, ಹೆಡ್ ಕಾನ್ಸ್ಸ್ಟಬಲ್ ರಾಜೇಶ್ ಮೇಲು ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆಯೆಂದು ತಿಳಿದು ಬಂದಿದೆ.
ಬುಧವಾರ ಸಂಶಯಾಸ್ಪದ ರೀತಿಯಲ್ಲಿ ಪೆರ್ಡೂರು ತೋಟದಲ್ಲಿ ಶವವಾಗಿ ಪತ್ತೆಯಾಗುವ ಮುನ್ನ ಸ್ಕಾರ್ಪಿಯೋ ಗಾಡಿಯಲ್ಲಿ ದನಗಳನ್ನು ಸಾಗಿಸುತ್ತಿದ್ದವರ ಮೇಲೆ ಕೆಲವರು ದಾಳಿ ನಡೆಸಿ ಸ್ಕಾರ್ಪಿಯೋ ವಾಹನವನ್ನು ಪುಡಿಗಟ್ಟಿದ್ದರು. ನಂತರ ಮೃತ ಹುಸೇನಬ್ಬ ಮನೆಯವರು ಹುಸೇನಬ್ಬರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬಜರಂಗದಳದವರು ಹಲ್ಲೆಗೈದು ಕೊಲೆಗೈದಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು.
ಈಗ ಪುತ್ತೂರಿನ ಸಬ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಈ ಪ್ರಕರಣ ತನಿಖೆ ನಡೆಸುವ ಸಾಧ್ಯತೆಗಳ ಬಗ್ಗೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…