Featured

ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ನಿಧನ : ಗಣ್ಯರಿಂದ ಸಂತಾಪ -Vishwanews24

ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ನಿಧನ : ಗಣ್ಯರಿಂದ ಸಂತಾಪ -Vishwanews24

ಬೆಂಗಳೂರು : ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ (80) ಸೋಮವಾರ ನಿಧನರಾಗಿದ್ದು, ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನಗರದ ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ಸಿಗ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಫರ್ನಾಂಡಿಸ್‌ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ‌ ಮತ್ತು ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ.‌ ಸರಳ,‌ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಕಾರ್ಯಕರ್ತರ ನಾಯಕರಾಗಿದ್ದರು. ಆಸ್ಕರ್ ಕುಟುಂಬದ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ” ಎಂದು ಹೇಳಿದ್ದಾರೆ.

ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, “ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು, ಸರಳ ಸಜ್ಜನ ನಾಯಕರಾಗಿ ಗುರುತಿಸಿಕೊಂಡಿದ್ದರು. ದೇವರು ಅವರಿಗೆ ಸದ್ಗತಿ ನೀಡಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago