Featured

ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ನಿಧನ : ಗಣ್ಯರಿಂದ ಸಂತಾಪ -Vishwanews24

ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ನಿಧನ : ಗಣ್ಯರಿಂದ ಸಂತಾಪ -Vishwanews24

ಬೆಂಗಳೂರು : ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ (80) ಸೋಮವಾರ ನಿಧನರಾಗಿದ್ದು, ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನಗರದ ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ಸಿಗ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಫರ್ನಾಂಡಿಸ್‌ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ‌ ಮತ್ತು ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ.‌ ಸರಳ,‌ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಕಾರ್ಯಕರ್ತರ ನಾಯಕರಾಗಿದ್ದರು. ಆಸ್ಕರ್ ಕುಟುಂಬದ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ” ಎಂದು ಹೇಳಿದ್ದಾರೆ.

ಇನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, “ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು, ಸರಳ ಸಜ್ಜನ ನಾಯಕರಾಗಿ ಗುರುತಿಸಿಕೊಂಡಿದ್ದರು. ದೇವರು ಅವರಿಗೆ ಸದ್ಗತಿ ನೀಡಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

31 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

47 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

54 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago