ನವದೆಹಲಿ :ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಪಕ್ಷಾಂತರ ಪರ್ವವೂ ಜೋರಾಗಿ ನಡೆದಿದ್ದು, ಹಿರಿಯ ನಟಿ, ಮಾಜಿ ಸಂಸದೆ ಜಯಪ್ರದಾ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಈ ಹಿಂದೆ ಸಮಾಜವಾದಿ ಪಕ್ಷದಲ್ಲಿದ್ದ ಜಯಪ್ರದಾ ಅಮರ್ ಸಿಂಗ್ ಅವರ ಆಪ್ತರಲ್ಲಿ ಒಬ್ಬರಾಗಿದ್ದರು. ಮುಲಾಯಂ ಸಿಂಗ್ ಯಾದವ್ ಹಾಗೂ ಅಮರ್ ಸಿಂಗ್ ನಡುವೆ ಭಿನ್ನಾಭಿಪ್ರಾಯ ತಲೆದೋರಿದ ಬಳಿಕ ಅಮರ್ ಸಿಂಗ್ ಜೊತೆ ಗುರುತಿಸಿಕೊಂಡಿದ್ದರು.
ಇದೀಗ ಜಯಪ್ರದಾ ಬಿಜೆಪಿ ಸೇರ್ಪಡೆಗೊಂಡಿದ್ದು, ಉತ್ತರ ಪ್ರದೇಶದ ಯಾವುದಾದರೊಂದು ಕ್ಷೇತ್ರದಿಂದ ಲೋಕಸಭಾ ಚುನಾವಣೆಯ ಕಣಕ್ಕಿಳಿಯುವ ಸಾಧ್ಯತೆ ಇದೆ. ಸೆಲೆಬ್ರಿಟಿಗಳನ್ನು ಸೆಳೆಯುವಲ್ಲಿ ಬಿಜೆಪಿ ಮುಂದಿದ್ದು ಕೆಲ ದಿನಗಳ ಹಿಂದಷ್ಟೇ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬಿಜೆಪಿ ಸೇರ್ಪಡೆಗೊಂಡಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…