ಬೆಂಗಳೂರು: ಮೆದುಳಿನ ರಕ್ತಸ್ರಾವದಿಂದ ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿದೆ. ಹೇಮಾ ಅವರ ಮಗ ಐರ್ಲೆಂಡ್ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಕಾಯಲಾಗುತ್ತಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹಿರಿಯ ನಟಿ ಶೀಘ್ರ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಇತ್ತೀಚೆಗೆ ನಿಧನರಾದ ಹಿರಿಯ ನಟಿ ಲೀಲಾವತಿ ಅವರ ಪುಣ್ಯತಿಥಿ ಮೊನ್ನೆ 18ರಂದು ಅವರ ನೆಲಮಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ನೆರವೇರಿತ್ತು. ಅದಕ್ಕೆ ಹೇಮಾ ಚೌಧರಿಯವರು ಬಂದಿದ್ದರು. ಅದಾದ ನಂತರ ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯ ಉಂಟಾಗಿದೆ.
ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ತಮಿಳು ಸುಮಾರು 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಕಮಲ್ ಹಾಸನ್, ಚಿರಂಜೀವಿ, ಮೋಹನ್ ಬಾಬು, ಮಲಯಾಳಂ ಸೂಪರ್ ಸ್ಟಾರ್ ಪ್ರೇಮ್ ನಜೀರ್, ಅನಂತ್ ನಾಗ್, ಶಂಕರ್ ನಾಗ್, ರವಿಚಂದ್ರನ್ ಹೀಗೆ ಅನೇಕ ನಟರ ಜತೆ ಹೇಮಾ ಚೌಧರಿ ತೆರೆ ಹಂಚಿಕೊಂಡಿದ್ದರು.
2011ರಲ್ಲಿ ಕನ್ನಡ ಕಿರುತೆರೆಗೆ ಜನಪ್ರಿಯ ಧಾರವಾಹಿ ‘ಅಮೃತವರ್ಷಿಣಿ’ಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿ ಜನರ ಮನಸೂರೆಗೊಂಡಿದ್ದರು. ಜಯಪ್ರಧಾ, ಜಯಸುಧಾ, ಶ್ರೀದೇವಿ, ಜಯಮಾಲ, ಆರತಿ, ಮಂಜುಳಾ, ಪದ್ಮಪ್ರಿಯ, ಲಕ್ಷ್ಮೀ ಮೊದಲಾದವರ ಜತೆ ತೆರೆಹಂಚಿಕೊಂಡಿದ್ದಾರೆ. ಶುಭಾಶಯ (ಚಲನಚಿತ್ರ) (1977), ಗಾಳಿಮಾತು(1981) ಮತ್ತು ವೀರಪ್ಪನಾಯ್ಕ(1997) ಚಿತ್ರಗಳಲ್ಲಿಯ ಅಮೋಘ ಅಭಿನಯದಿಂದ ಜನಮನ್ನಣೆ ಗಳಿಸಿದ್ದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…