Featured

ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ; ಐಸಿಯುನಲ್ಲಿ ಚಿಕಿತ್ಸೆ – vishwanews24

ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ; ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ಮೆದುಳಿನ ರಕ್ತಸ್ರಾವದಿಂದ ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿದೆ. ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಕಾಯಲಾಗುತ್ತಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹಿರಿಯ ನಟಿ ಶೀಘ್ರ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇತ್ತೀಚೆಗೆ ನಿಧನರಾದ ಹಿರಿಯ ನಟಿ ಲೀಲಾವತಿ ಅವರ ಪುಣ್ಯತಿಥಿ ಮೊನ್ನೆ 18ರಂದು ಅವರ ನೆಲಮಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ನೆರವೇರಿತ್ತು. ಅದಕ್ಕೆ ಹೇಮಾ ಚೌಧರಿಯವರು ಬಂದಿದ್ದರು. ಅದಾದ ನಂತರ ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯ ಉಂಟಾಗಿದೆ.

ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ತಮಿಳು ಸುಮಾರು 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್‌, ಕಮಲ್ ಹಾಸನ್, ಚಿರಂಜೀವಿ, ಮೋಹನ್ ಬಾಬು, ಮಲಯಾಳಂ ಸೂಪರ್ ಸ್ಟಾರ್ ಪ್ರೇಮ್ ನಜೀರ್, ಅನಂತ್ ನಾಗ್, ಶಂಕರ್ ನಾಗ್, ರವಿಚಂದ್ರನ್ ಹೀಗೆ ಅನೇಕ ನಟರ ಜತೆ ಹೇಮಾ ಚೌಧರಿ ತೆರೆ ಹಂಚಿಕೊಂಡಿದ್ದರು.

2011ರಲ್ಲಿ ಕನ್ನಡ ಕಿರುತೆರೆಗೆ ಜನಪ್ರಿಯ ಧಾರವಾಹಿ ‘ಅಮೃತವರ್ಷಿಣಿ’ಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿ ಜನರ ಮನಸೂರೆಗೊಂಡಿದ್ದರು. ಜಯಪ್ರಧಾ, ಜಯಸುಧಾ, ಶ್ರೀದೇವಿ, ಜಯಮಾಲ, ಆರತಿ, ಮಂಜುಳಾ, ಪದ್ಮಪ್ರಿಯ, ಲಕ್ಷ್ಮೀ ಮೊದಲಾದವರ ಜತೆ ತೆರೆಹಂಚಿಕೊಂಡಿದ್ದಾರೆ. ಶುಭಾಶಯ (ಚಲನಚಿತ್ರ) (1977), ಗಾಳಿಮಾತು(1981) ಮತ್ತು ವೀರಪ್ಪನಾಯ್ಕ(1997) ಚಿತ್ರಗಳಲ್ಲಿಯ ಅಮೋಘ ಅಭಿನಯದಿಂದ ಜನಮನ್ನಣೆ ಗಳಿಸಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago