Featured

ಹಿರಿಯ ನಟ ಅನಂತ್‌ ನಾಗ್‌ಗೆ 75ನೇ ಜನ್ಮದಿನ; ಮಂಗಳೂರಿನಲ್ಲಿ ನಡೆದ ಅದ್ಧೂರಿ ‘ಅನಂತ ಅಭಿನಂದನೆ -Vishwanews24

ಹಿರಿಯ ನಟ ಅನಂತ್‌ ನಾಗ್‌ಗೆ 75ನೇ ಜನ್ಮದಿನ; ಮಂಗಳೂರಿನಲ್ಲಿ ನಡೆದ ಅದ್ಧೂರಿ ‘ಅನಂತ ಅಭಿನಂದನೆ’

ನಾನು ಕರಾವಳಿಯಲ್ಲಿ ಬೆಳೆದವ ಎಂಬುದು ಹೆಮ್ಮೆ , ಮಂಗಳಾದೇವಿ ಕೃಪೆಯಿಂದ ಇಲ್ಲಿ ಹುಟ್ಟುಹಬ್ಬ ನೆರವೇರಿದೆ : ಅನಂತ ನಾಗ್‌

ಹಿರಿಯ ನಟ ಅನಂತ ನಾಗ್‌ ಅವರ 75ನೇ ಜನ್ಮದಿನ, ವೃತ್ತಿಜೀವನದ 50ರ ಸಂಭ್ರಮ ಮತ್ತು ಸನ್ಮಾನದ ‘ಅನಂತ ಅಭಿನಂದನೆ’ ಕಾರ್ಯಕ್ರಮ ನಗರದ ಟಿ ವಿ ರಮಣ ಪೈ ಸಭಾಂಗಣದಲ್ಲಿ ಭಾನುವಾರ (ಸೆ.3) ನಡೆಯಿತು. ನಟ ಅನಂತ ನಾಗ್‌ ಮತ್ತು ಗಾಯತ್ರಿ ದಂಪತಿಯನ್ನು ಅತಿಥಿಗಳು ಮಲ್ಲಿಗೆ, ಜಾಜಿ ಹೂವಿನ ಮಾಲೆ, ಬೆಳ್ಳಿಯ ವೀಳ್ಯದ ಎಲೆ, ತುಳುನಾಡಿನ ಪರಂಪರೆಯ ಕಂಬಳದ ಬೆತ್ತ, ಪುಷ್ಪವೃಷ್ಟಿ ಸಹಿತ ವಿಶೇಷವಾಗಿ ಸನ್ಮಾನಿಸಿ, ಗೌರವಿಸಿದರು.

ವಿಧಾನಸಭೆ ಸ್ಪೀಕರ್‌ ಯು ಟಿ ಖಾದರ್‌ ಅಧ್ಯಕ್ಷತೆ ವಹಿಸಿ, ‘ಈ ಸನ್ಮಾನವು ಸಂಸ್ಕೃತಿ ವಿನಿಮಯ ಮೂಲಕ ಎಲ್ಲರಿಗೂ ಪ್ರೇರಣೆ ಕೊಡುವ ಕಾರ್ಯಕ್ರಮ. ಅನಂತ ನಾಗ್‌ ಕಾಲ ನಿರ್ಣಾಯಕರು. ಅವರ ಕಾಲದಲ್ಲಿ ನಾವಿದ್ದೇವೆ ಎಂಬುದು ಹಿರಿಮೆ. ಅನಂತ ನಾಗ್‌ ಕರ್ನಾಟಕದ ಅಮಿತಾಭ್‌ ಬಚ್ಚನ್‌’ ಎಂದು ಹೊಗಳಿದರು.

‘ಅನಂತನಾಗ್‌ ಅವರ ಚಿತ್ರರಂಗದ 50 ವರ್ಷ ಅಂದರೆ ಮಹಾನ್‌ ಸಾಧನೆ. ಅವರಿಗೆ ಪದ್ಮಭೂಷಣ, ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಬಂದರೆ, ಪ್ರಶಸ್ತಿಗೆ ಮೌಲ್ಯ ಬರುತ್ತದೆ. ಅವರು ನೂರ್ಕಾಲ ಬಾಳಲಿ’ ಎಂದು ನಿರ್ದೇಶಕ, ನಟ ರಿಷಬ್‌ ಶೆಟ್ಟಿ ಹಾರೈಸಿದರು. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ‘ದೇಶ ಕಂಡ ಅದ್ಭುತ ನಾಯಕ ನಟ ಅನಂತ ನಾಗ್‌. ಮಲಯಾಳಂ ಸಿನಿಮಾದ ಸರಳ ನಟನೆ ಅನಂತ ನಾಗ್‌ ಅವರಲ್ಲಿ ಕಂಡಿದ್ದೇನೆ. ಅವರೊಬ್ಬ ಅಪ್ಪಟ ರಾಷ್ಟ್ರಭಕ್ತ’ ಎಂದು ಅಭಿನಂದಿಸಿದರು.

ಶಾಸಕ ಡಿ ವೇದವ್ಯಾಸ ಕಾಮತ್‌ ಮಾತನಾಡಿ, ‘ಇಡೀ ಕುಟುಂಬ ನೋಡುವ ಸಿನಿಮಾ ನೀಡುತ್ತಿದ್ದ ಅನಂತ ನಾಗ್‌ ಅವರ ಕೊಡುಗೆ ಸಮಾಜಕ್ಕೆ ದೊಡ್ಡದು. ಮನಸ್ಸಿನ ದುಗುಡಕ್ಕೆ ಸಿನಿಮಾ ಸಾಂತ್ವನ ನೀಡುತ್ತದೆ. ಹಾಗಾಗಿ ಕಲಾವಿದರ ಶ್ರಮ ಸಾರ್ಥಕ. ಕಲಾವಿದರಾಗಿ ಅನಂತನಾಗ್‌ ಹಲವರನ್ನು ಬೆಳೆಸಿದ್ದಾರೆ. ಅವರ ಮಾರ್ಗದರ್ಶನ ಕಿರಿಯರಿಗೆ ಸಿಗಲಿದೆ’ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಮಾತನಾಡಿ, ‘ನಾಡಿನ ಜನರ ಪ್ರೀತಿ ತೋರಿಸುವ ಕಾರ್ಯಕ್ರಮವಿದು. ಸುಂದರ ಕ್ಷಣದ ಗೊಂಚಲಿನ ಅನುಭವ ಇಲ್ಲಿಆಗಿದೆ. ಅನಂತನಾಗ್‌ ನಮ್ಮವರಾಗಿ ಸಂಬಂಧ ಬೆಳೆದವರು’ ಎಂದರು. ಹಿರಿಯ ನಟ ಡಾ ದೇವದಾಸ ಕಾಪಿಕಾಡ್‌ ಮಾತನಾಡಿ, ‘ಕನ್ನಡದ ಸ್ಫುರದ್ರೂಪಿ ನೈಜ ನಟನೆಯ ನಟ ಅನಂತ ನಾಗ್‌ ನಮಗೆ ಆದರ್ಶ. ಅವರ ಸಿನಿಮಾದ ಎಲ್ಲ ಹಾಡುಗಳೂ ಸೂಪರ್‌ ಹಿಟ್‌ ಆಗಿವೆ. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ’ ಎಂದರು.

ಮಂಗಳಾದೇವಿ ಕೃಪೆ ಕಾರಣ
‘ನಾನು ಕರಾವಳಿಯಲ್ಲಿ ಬೆಳೆದವ ಎಂಬುದು ಹೆಮ್ಮೆ. ನೂರಾರು ಬಾರಿ ಇಲ್ಲಿಂದ ಓಡಾಡಿದ್ದೇನೆ. ಮಂಗಳಾದೇವಿ ಕೃಪೆಯಿಂದ ಇಂದು ಇಲ್ಲಿ ಹುಟ್ಟುಹಬ್ಬ ನೆರವೇರಿದೆ. ಎಲ್ಲ ಮಹಾನ್‌ ವ್ಯಕ್ತಿಗಳ ನಟನೆ ಮಾಡಿದ್ದೇನೆ. ಗುರುಗಳ ಆಶಿರ್ವಾದದಿಂದ ಇಲ್ಲಿ ಸನ್ಮಾನ ಪಡೆದಿದ್ದು, ಧನ್ಯತಾ ಭಾವನೆ ಮೂಡಿದೆ. ನನ್ನ ಹಾಡಿಗೆ ಪುಟಾಣಿಗಳ ನೃತ್ಯ ಅದ್ಭುತ ಕಲ್ಪನೆ..’ ಎನ್ನುತ್ತಾ ‘ಭಾಗ್ಯದ ಲಕ್ಷ್ಮೀ ಬಾರಮ್ಮಾ..’ ಹಾಡನ್ನು ಹಾಡಿ ಹಿರಿಯ ನಟ ಅನಂತ್‌ ನಾಗ್‌ ಎಲ್ಲರನ್ನೂ ರಂಜಿಸಿದರು.

ಕೆನರಾ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ವಾಸುದೇವ ಕಾಮತ್‌, ತುಳು ಸಾಂಸ್ಕೃತಿಕ ಪ್ರತಿಷ್ಠಾನದ ಗಿರಿಧರ ಶೆಟ್ಟಿ, ರಂಗ ಸಂಗಾತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಬೆಂಗಳೂರು ಪ್ರೆಸ್‌ ಕ್ಲಬ್‌ ಅಧ್ಯಕ್ಷ ಸದಾಶಿವ ಶೆಣೈ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಮನೋಹರ್‌ ಪ್ರಸಾದ್‌ ಸ್ವಾಗತಿಸಿದರು. ಶಶಿರಾಜ್‌ ಕಾವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಂತನಾಗ್‌ ಅಭಿನಂದನಾ ಸಮಿತಿ ಸಂಚಾಲಕ ಗೋಪಿನಾಥ್‌ ಭಟ್‌ ವಂದಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago