ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ – Vishwanews24

Featured, ರಾಜ್ಯ ನ್ಯೂಸ್

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಬೆಂಗಳೂರು, : ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ- ನಿರ್ದೇಶಕ ದ್ವಾರಕೀಶ್ ಹೃದಯಘಾತದಿಂದ ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇವರ ನಿಧನದ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರು ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ.

ಕಡಬ : ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೃತ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಕಾರಣ  ..!Vishwanews24

ಆರಂಭದಲ್ಲಿ ಹಾಸ್ಯನಟನಾಗಿ, ಸಹ ನಟನಾಗಿ ಕಾಣಿಸಿಕೊಳ್ಳುತ್ತಿದ್ದ ದ್ವಾರಕೀಶ್ 1966ರಲ್ಲಿ ಮೊದಲಿಗೆ ಮಮತೆಯ ಬಂಧನ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಆದರೆ ದೊಡ್ಡ ಮಟ್ಟದ ಹಿಟ್ ಹಾಗೂ ಚಿತ್ರರಂಗದಲ್ಲಿ ನೆಲೆಯೂರುವಂತೆ ಮಾಡಿದ್ದು 1969ರಲ್ಲಿ ಸ್ವತಂತ್ರವಾಗಿ ನಿರ್ಮಾಣ ಮಾಡಿದ್ದ ಮೇಯರ್ ಮುತ್ತಣ್ಣ ಸಿನಿಮಾ. 1969ರಿಂದ ಈವರೆಗೆ ದ್ವಾರಕೀಶ್ ಸುಮಾರು 47 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

ದೇಶದಲ್ಲಿ ಮೋದಿ ಹವಾ ಈಗ ನಡೆಯುತ್ತಿಲ್ಲ, ಜನ ಎಚ್ಚೆತ್ತುಕೊಂಡಿದ್ದಾರೆ  : ಸಚಿವೆ ಮೋಟಮ್ಮ – Vishwanews24

 

Leave a Reply