ಉಡುಪಿ

ಹಿರಿಯ ರಾಜಕಾರಣಿ ಕಾಗೋಡಿಗೆ ಅವಕಾಶ ಮಾಡಿಕೊಟ್ಟುವುದಕ್ಕಾಗಿ ಮಂತ್ರಿ ಸ್ಥಾನ ತ್ಯಾಗ ಮಾಡಿದ ಸೊರಕೆ: ಡಿ ಕೆ ಶಿವಕುಮಾರ್;

ಹಿರಿಯ ರಾಜಕಾರಣಿ ಕಾಗೋಡಿಗೆ ಅವಕಾಶ ಮಾಡಿಕೊಟ್ಟುವುದಕ್ಕಾಗಿ ಮಂತ್ರಿ ಸ್ಥಾನ ತ್ಯಾಗ ಮಾಡಿದ ಸೊರಕೆ: ಡಿ ಕೆ ಶಿವಕುಮಾರ್

ಕಾಪು:ರಾಜ್ಯಕ್ಕೆ ವಿನಯ್ ಕುಮಾರ್ ಕುಮಾರ್ ಸೊರಕೆ ದೊಡ್ಡ ಬಹು ದೊಡ್ಡ ಆಸ್ತಿ. ರಾಜ್ಯದಲ್ಲಿ ಇನ್ನೊಬ್ಬ ವಿನಯ್ ಕುಮಾರ್ ಸೊರಕೆ ಯನ್ನು ತಯಾರಿ ಮಾಡಬೇಕಾದರೆ ಇನ್ನು 25 ವರ್ಷ ಬೇಕಾಗಬಹುದು. ಅಭಿವೃದ್ಧಿಯ ಹರಕಾರರಾದ ವಿನಯ್ ಕುಮಾರ್ 

ಸೊರಕೆಯವರನ್ನು ಉಳಿಸಿಕೊಳ್ಳುವುದು ಕಾಪು ಕ್ಷೇತ್ರದ ಜನತೆಯ ಬಹುದೊಡ್ಡ ಕರ್ತವ್ಯಅಂತಾ ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿಯವರ ನಂತರದ ಸ್ಥಾನವನ್ನು ವಿನಯ್ ಕುಮಾರ್ ಸೊರಕೆ ಸ‌ಮ‌ರ್ಥವಾಗಿ ತುಂಬಿದ್ದಾರೆ. ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ವರಿಗೆ ಅವಕಾಶ ಮಾಡಿಕೊಡುವುದಕ್ಕಾಗಿ ಮಂತ್ರಿ ಸ್ಥಾನವನ್ನೇ ತ್ಯಾಗ ಮಾಡಿದ ಸೊರಕೆಯವರನ್ನು ಈ ಬಾರಿ ಭಾರಿ ಅಂತರದಿಂದ  ಗೆಲ್ಲಿಸಿ ಮತ್ತೊಮ್ಮೆ ವಿಧಾನ ಸೌಧಧ ಪಡಸಾಲೆಗೆ ಕಳುಹಿಸಿಬೇಕಾಗಿದೆ ಅಂತಾ ಶಿವಕುಮಾರ್ ಹೇಳಿದ್ರು.  ಮೋದಿ ಉಡುಪಿ ಸಮಾವೇಶದ ಬಗ್ಗೆ ಮಾತನಾಡಿದ ಡಿಕೆಶಿ ದೇವೆಗೌಡ ರನ್ನು ಹಾಡಿ ಹೊಗಳಿದ ಮೋದಿ ಬಣ್ಣ ಬಯಲಾಗಿದ್ದು ಚುನಾವಣಾ ಸಂದರ್ಭದಲ್ಲಿ ವೈರಿಯನ್ನು ಹೊಗಳಿದ್ದು ಬಿಜೆಪಿ ಎಷ್ಟು ವೀಕ್ ಆಗಿದೆಅನ್ನೊದಕ್ಕೆ ಇದೇ ದೊಡ್ಡ  ಉದಾಹರಣೆ ಅಂತಾ ಬಿಜೆಪಿ ಪಕ್ಷದ ಅಸಲಿಯತ್ತನ್ನು ಬಯಲು ಮಾಡಿದ್ರು.

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ವಿನಯ್ ಕುಮಾರ್ ಸೊರಕೆ ಮಾತನಾಡಿ ಯುಪಿಸಿ ಎಲ್ ನ ಬಹುದೊಡ್ಡ ಸಮಸ್ಯೆ ಇತ್ಯರ್ಥ ಮಾಡಬೇಕಾದರೆ ಡಿ. ಕೆ ಶಿವಕುಮಾರ್ ಅವರೇ ಬರಬೇಕಾಯಿತು. ಉಷ್ಣ ವಿದ್ಯುತ್ ಸ್ಥಾವರ ಇದ್ದ ಕಡೆ 24 ಗಂಟೆ ವಿದ್ಯುತ್ ನೀಡಬೇಕೆಂಬ ಕಾನೂನಿದ್ದರೂ ಯುಪಿಸಿಎಲ್ ಕಂಪೆನಿ ಇದನ್ನು ಪಾಲನೇ ಮಾಡ್ತಾ ಇರಲಿಲ್ಲ. 24 ಗಂಟೆ ವಿದ್ಯುತ್ ಕನಸು ಶಿವಕುಮಾರ್ ಅವಧಿಯಲ್ಲಿ ನನಸಾಗಿದೆ ಅಂತಾ ತಿಳಿಸಿದರು.

ಚಿತ್ರ ನಟ ಸಾಧು ಕೋಕಿಲ ಮಾತನಾಡಿ ಬಡವರ ಅಭಿವೃದ್ಧಿಯಲ್ಲಿ ಮಹತ್ವದ ಕೆಲಸವನ್ನು ಮಾಡಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಶ್ರಮಿಸಬೇಕಾಗಿದೆ ಅಂತಾ ತಿಳಿಸಿದ್ರು.

ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಶೆಟ್ಟಿ, ಯು. ಆರ್ ಸಭಾಪತಿ, ರಾಜಶೇಖರ್ ಕೋಟ್ಯಾನ್,ಜನಾರ್ಧನ  ತೋನ್ಸೆ, ಅಶೋಕ್ ಕುಮಾರ್ ಕೊಡವೂರು, ದಿವಾಕರ ಶೆಟ್ಟಿ, ದಿನೇಶ್ ಕೋಟ್ಯಾನ್, ಮೆಲ್ವಿನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. 

 

 

 

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago