ಹಿರಿಯ ರಾಜಕಾರಣಿ ಕಾಗೋಡಿಗೆ ಅವಕಾಶ ಮಾಡಿಕೊಟ್ಟುವುದಕ್ಕಾಗಿ ಮಂತ್ರಿ ಸ್ಥಾನ ತ್ಯಾಗ ಮಾಡಿದ ಸೊರಕೆ: ಡಿ ಕೆ ಶಿವಕುಮಾರ್
ಕಾಪು:ರಾಜ್ಯಕ್ಕೆ ವಿನಯ್ ಕುಮಾರ್ ಕುಮಾರ್ ಸೊರಕೆ ದೊಡ್ಡ ಬಹು ದೊಡ್ಡ ಆಸ್ತಿ. ರಾಜ್ಯದಲ್ಲಿ ಇನ್ನೊಬ್ಬ ವಿನಯ್ ಕುಮಾರ್ ಸೊರಕೆ ಯನ್ನು ತಯಾರಿ ಮಾಡಬೇಕಾದರೆ ಇನ್ನು 25 ವರ್ಷ ಬೇಕಾಗಬಹುದು. ಅಭಿವೃದ್ಧಿಯ ಹರಕಾರರಾದ ವಿನಯ್ ಕುಮಾರ್
ಸೊರಕೆಯವರನ್ನು ಉಳಿಸಿಕೊಳ್ಳುವುದು ಕಾಪು ಕ್ಷೇತ್ರದ ಜನತೆಯ ಬಹುದೊಡ್ಡ ಕರ್ತವ್ಯಅಂತಾ ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿಯವರ ನಂತರದ ಸ್ಥಾನವನ್ನು ವಿನಯ್ ಕುಮಾರ್ ಸೊರಕೆ ಸಮರ್ಥವಾಗಿ ತುಂಬಿದ್ದಾರೆ. ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ವರಿಗೆ ಅವಕಾಶ ಮಾಡಿಕೊಡುವುದಕ್ಕಾಗಿ ಮಂತ್ರಿ ಸ್ಥಾನವನ್ನೇ ತ್ಯಾಗ ಮಾಡಿದ ಸೊರಕೆಯವರನ್ನು ಈ ಬಾರಿ ಭಾರಿ ಅಂತರದಿಂದ ಗೆಲ್ಲಿಸಿ ಮತ್ತೊಮ್ಮೆ ವಿಧಾನ ಸೌಧಧ ಪಡಸಾಲೆಗೆ ಕಳುಹಿಸಿಬೇಕಾಗಿದೆ ಅಂತಾ ಶಿವಕುಮಾರ್ ಹೇಳಿದ್ರು. ಮೋದಿ ಉಡುಪಿ ಸಮಾವೇಶದ ಬಗ್ಗೆ ಮಾತನಾಡಿದ ಡಿಕೆಶಿ ದೇವೆಗೌಡ ರನ್ನು ಹಾಡಿ ಹೊಗಳಿದ ಮೋದಿ ಬಣ್ಣ ಬಯಲಾಗಿದ್ದು ಚುನಾವಣಾ ಸಂದರ್ಭದಲ್ಲಿ ವೈರಿಯನ್ನು ಹೊಗಳಿದ್ದು ಬಿಜೆಪಿ ಎಷ್ಟು ವೀಕ್ ಆಗಿದೆಅನ್ನೊದಕ್ಕೆ ಇದೇ ದೊಡ್ಡ ಉದಾಹರಣೆ ಅಂತಾ ಬಿಜೆಪಿ ಪಕ್ಷದ ಅಸಲಿಯತ್ತನ್ನು ಬಯಲು ಮಾಡಿದ್ರು.
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ವಿನಯ್ ಕುಮಾರ್ ಸೊರಕೆ ಮಾತನಾಡಿ ಯುಪಿಸಿ ಎಲ್ ನ ಬಹುದೊಡ್ಡ ಸಮಸ್ಯೆ ಇತ್ಯರ್ಥ ಮಾಡಬೇಕಾದರೆ ಡಿ. ಕೆ ಶಿವಕುಮಾರ್ ಅವರೇ ಬರಬೇಕಾಯಿತು. ಉಷ್ಣ ವಿದ್ಯುತ್ ಸ್ಥಾವರ ಇದ್ದ ಕಡೆ 24 ಗಂಟೆ ವಿದ್ಯುತ್ ನೀಡಬೇಕೆಂಬ ಕಾನೂನಿದ್ದರೂ ಯುಪಿಸಿಎಲ್ ಕಂಪೆನಿ ಇದನ್ನು ಪಾಲನೇ ಮಾಡ್ತಾ ಇರಲಿಲ್ಲ. 24 ಗಂಟೆ ವಿದ್ಯುತ್ ಕನಸು ಶಿವಕುಮಾರ್ ಅವಧಿಯಲ್ಲಿ ನನಸಾಗಿದೆ ಅಂತಾ ತಿಳಿಸಿದರು.
ಚಿತ್ರ ನಟ ಸಾಧು ಕೋಕಿಲ ಮಾತನಾಡಿ ಬಡವರ ಅಭಿವೃದ್ಧಿಯಲ್ಲಿ ಮಹತ್ವದ ಕೆಲಸವನ್ನು ಮಾಡಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಶ್ರಮಿಸಬೇಕಾಗಿದೆ ಅಂತಾ ತಿಳಿಸಿದ್ರು.
ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಶೆಟ್ಟಿ, ಯು. ಆರ್ ಸಭಾಪತಿ, ರಾಜಶೇಖರ್ ಕೋಟ್ಯಾನ್,ಜನಾರ್ಧನ ತೋನ್ಸೆ, ಅಶೋಕ್ ಕುಮಾರ್ ಕೊಡವೂರು, ದಿವಾಕರ ಶೆಟ್ಟಿ, ದಿನೇಶ್ ಕೋಟ್ಯಾನ್, ಮೆಲ್ವಿನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…