ಉಡುಪಿ

ಹಿರಿಯ ರಾಜಕಾರಣಿ ಕಾಗೋಡಿಗೆ ಅವಕಾಶ ಮಾಡಿಕೊಟ್ಟುವುದಕ್ಕಾಗಿ ಮಂತ್ರಿ ಸ್ಥಾನ ತ್ಯಾಗ ಮಾಡಿದ ಸೊರಕೆ: ಡಿ ಕೆ ಶಿವಕುಮಾರ್;

ಹಿರಿಯ ರಾಜಕಾರಣಿ ಕಾಗೋಡಿಗೆ ಅವಕಾಶ ಮಾಡಿಕೊಟ್ಟುವುದಕ್ಕಾಗಿ ಮಂತ್ರಿ ಸ್ಥಾನ ತ್ಯಾಗ ಮಾಡಿದ ಸೊರಕೆ: ಡಿ ಕೆ ಶಿವಕುಮಾರ್

ಕಾಪು:ರಾಜ್ಯಕ್ಕೆ ವಿನಯ್ ಕುಮಾರ್ ಕುಮಾರ್ ಸೊರಕೆ ದೊಡ್ಡ ಬಹು ದೊಡ್ಡ ಆಸ್ತಿ. ರಾಜ್ಯದಲ್ಲಿ ಇನ್ನೊಬ್ಬ ವಿನಯ್ ಕುಮಾರ್ ಸೊರಕೆ ಯನ್ನು ತಯಾರಿ ಮಾಡಬೇಕಾದರೆ ಇನ್ನು 25 ವರ್ಷ ಬೇಕಾಗಬಹುದು. ಅಭಿವೃದ್ಧಿಯ ಹರಕಾರರಾದ ವಿನಯ್ ಕುಮಾರ್ 

ಸೊರಕೆಯವರನ್ನು ಉಳಿಸಿಕೊಳ್ಳುವುದು ಕಾಪು ಕ್ಷೇತ್ರದ ಜನತೆಯ ಬಹುದೊಡ್ಡ ಕರ್ತವ್ಯಅಂತಾ ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿಯವರ ನಂತರದ ಸ್ಥಾನವನ್ನು ವಿನಯ್ ಕುಮಾರ್ ಸೊರಕೆ ಸ‌ಮ‌ರ್ಥವಾಗಿ ತುಂಬಿದ್ದಾರೆ. ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ವರಿಗೆ ಅವಕಾಶ ಮಾಡಿಕೊಡುವುದಕ್ಕಾಗಿ ಮಂತ್ರಿ ಸ್ಥಾನವನ್ನೇ ತ್ಯಾಗ ಮಾಡಿದ ಸೊರಕೆಯವರನ್ನು ಈ ಬಾರಿ ಭಾರಿ ಅಂತರದಿಂದ  ಗೆಲ್ಲಿಸಿ ಮತ್ತೊಮ್ಮೆ ವಿಧಾನ ಸೌಧಧ ಪಡಸಾಲೆಗೆ ಕಳುಹಿಸಿಬೇಕಾಗಿದೆ ಅಂತಾ ಶಿವಕುಮಾರ್ ಹೇಳಿದ್ರು.  ಮೋದಿ ಉಡುಪಿ ಸಮಾವೇಶದ ಬಗ್ಗೆ ಮಾತನಾಡಿದ ಡಿಕೆಶಿ ದೇವೆಗೌಡ ರನ್ನು ಹಾಡಿ ಹೊಗಳಿದ ಮೋದಿ ಬಣ್ಣ ಬಯಲಾಗಿದ್ದು ಚುನಾವಣಾ ಸಂದರ್ಭದಲ್ಲಿ ವೈರಿಯನ್ನು ಹೊಗಳಿದ್ದು ಬಿಜೆಪಿ ಎಷ್ಟು ವೀಕ್ ಆಗಿದೆಅನ್ನೊದಕ್ಕೆ ಇದೇ ದೊಡ್ಡ  ಉದಾಹರಣೆ ಅಂತಾ ಬಿಜೆಪಿ ಪಕ್ಷದ ಅಸಲಿಯತ್ತನ್ನು ಬಯಲು ಮಾಡಿದ್ರು.

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ವಿನಯ್ ಕುಮಾರ್ ಸೊರಕೆ ಮಾತನಾಡಿ ಯುಪಿಸಿ ಎಲ್ ನ ಬಹುದೊಡ್ಡ ಸಮಸ್ಯೆ ಇತ್ಯರ್ಥ ಮಾಡಬೇಕಾದರೆ ಡಿ. ಕೆ ಶಿವಕುಮಾರ್ ಅವರೇ ಬರಬೇಕಾಯಿತು. ಉಷ್ಣ ವಿದ್ಯುತ್ ಸ್ಥಾವರ ಇದ್ದ ಕಡೆ 24 ಗಂಟೆ ವಿದ್ಯುತ್ ನೀಡಬೇಕೆಂಬ ಕಾನೂನಿದ್ದರೂ ಯುಪಿಸಿಎಲ್ ಕಂಪೆನಿ ಇದನ್ನು ಪಾಲನೇ ಮಾಡ್ತಾ ಇರಲಿಲ್ಲ. 24 ಗಂಟೆ ವಿದ್ಯುತ್ ಕನಸು ಶಿವಕುಮಾರ್ ಅವಧಿಯಲ್ಲಿ ನನಸಾಗಿದೆ ಅಂತಾ ತಿಳಿಸಿದರು.

ಚಿತ್ರ ನಟ ಸಾಧು ಕೋಕಿಲ ಮಾತನಾಡಿ ಬಡವರ ಅಭಿವೃದ್ಧಿಯಲ್ಲಿ ಮಹತ್ವದ ಕೆಲಸವನ್ನು ಮಾಡಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಶ್ರಮಿಸಬೇಕಾಗಿದೆ ಅಂತಾ ತಿಳಿಸಿದ್ರು.

ಕಾಂಗ್ರೆಸ್ ಮುಖಂಡರಾದ ನವೀನ್ ಚಂದ್ರ ಶೆಟ್ಟಿ, ಯು. ಆರ್ ಸಭಾಪತಿ, ರಾಜಶೇಖರ್ ಕೋಟ್ಯಾನ್,ಜನಾರ್ಧನ  ತೋನ್ಸೆ, ಅಶೋಕ್ ಕುಮಾರ್ ಕೊಡವೂರು, ದಿವಾಕರ ಶೆಟ್ಟಿ, ದಿನೇಶ್ ಕೋಟ್ಯಾನ್, ಮೆಲ್ವಿನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. 

 

 

 

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

14 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

17 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

17 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago