ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಸಕರಾಗಿ ಎರಡು ಮೂರು ಬಾರಿ ಗೆದ್ದಿದ್ದಾರೆ. ಅವರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ಯಾವ ತಪ್ಪೂ ಇಲ್ಲ. ಆದರೆ ಅದರ ಬಗ್ಗೆ ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳಬಹುದು, ಅದೇನು ಗ್ಯಾಂಬ್ಲಿಂಗ್ ಅಲ್ಲ. ಅವರಿಗೆ ಅರ್ಹತೆ ಇದೆ ಕೇಳ್ತಾರೆ. ನಾಯಕತ್ವ ವಿಚಾರ ಇರಲಿ, ಪುನಾರಚನೆ ಇರಲಿ ಹೈಕಮಾಂಡ್ ಮಾತ್ರವೇ ತೀರ್ಮಾನ ಮಾಡಬೇಕು. ಹೈಕಮಾಂಡ್ ಎಲ್ಲ ಗಮನಿಸಿದೆ, ಅವರಿಗೆ ಎಲ್ಲ ಗೊತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಅಂತ ಹೈಕಮಾಂಡ್ಗೆ ಗೊತ್ತಿದೆ, ಅವರು ಮಾಡ್ತಾರೆ” ಎಂದರು.
ಇದನ್ನೂ ಓದಿ:
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ್ ಆಕಾಂಕ್ಷಿನಾ ಅನ್ನೋ ವಿಚಾರವಾಗಿ ಮಾತನಾಡಿದ ಅವರು, “ಈಗ ಪುನಾರಚನೆ ಚರ್ಚೆ ಆಗ್ತಿದೆ ಅಷ್ಟೇ. ಅಧ್ಯಕ್ಷ ಸ್ಥಾನ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು. ಅದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಅನೇಕರಿಂದ ಮಾಹಿತಿ ಪಡೆದು ಹೈಕಮಾಂಡ್ ನಿರ್ಧಾರ ಮಾಡ್ತಾರೆ” ಎಂದು ತಿಳಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…