Featured

ಹೀರಾ ಗೋಲ್ಡ್ ವಂಚನೆ ಪ್ರಕರಣ : ನೌಹೀರಾ ಶೇಖ್ ಒಡೆತನದ 300 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ ಅಧಿಕಾರಿಗಳು -Vishwanews24

ಬೆಂಗಳೂರು : ಹೀರಾ ಗೋಲ್ಡ್ ವಂಚನೆ ಪ್ರಕರಣ ಸಂಬಂಧ ಎಂಇಪಿ ಪಕ್ಷದ ಮುಖ್ಯಸ್ಥೆ ನೌಹೀರಾ ಶೇಕ್ ಅವರಿಗೆ ಸೇರಿದ ಸುಮಾರು 300 ಕೋಟಿ ರೂ.ಗೂ ಅಧಿಕ ಆಸ್ತಿ ಹಾಗೂ ಹಣವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬ್ಯಾಂಕ್ ಗಳಿಗಿಂತ ಅಧಿಕ ಬಡ್ಡಿ ನೀಡುವ ಆಮಿಷ ಒಡ್ಡಿ ಹೀರಾ ಗೋಲ್ಡ್ ಕಂಪನಿ ಹೆಸರಿನಲ್ಲಿ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಜನರಿಗೆ ಸಾವಿರಾರು ಕೋಟಿ ರೂ.ಗಳನ್ನು ನೌಹೀರಾ ಶೇಕ್ ವಂಚನೆ ಮಾಡಿದ್ದರು. ಹೀಗಾಗಿ ಜಾರಿ ನಿರ್ದೇಶನಾಲಯ ಇದೀಗ 300 ಕೊಟಿ ಗೂ ಅಧಿಕ ಆಸ್ತಿ ಮತ್ತು ಹಣವನ್ನು ಜಪ್ತಿ ಮಾಡಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2014 ರ ಮೇ ತಿಂಗಳಲ್ಲಿ ಹೀರಾ ಸಮೂಹ ಸಂಸ್ಥೆಗಳ ಅಕ್ರಮ ಪತ್ತೆಗಾಗಿ ಆಂದ್ರಪ್ರದೇಶದ ಟೋಲಿ ಚೌಕಿಯಲ್ಲಿರುವ ಕಚೇರಿಯಲ್ಲಿ ಹುಡುಕಾಟ ನಡೆಸಿದ್ದರು. ನಂತರ ಅಧಿಕಾರಿಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಹೀರಾ ಗ್ರೂಪ್ ಭಾರತ ಮತ್ತು ವಿದೇಶಗಳಲ್ಲಿ ಕಂಪನಿಗಳನ್ನು ಹೊಂದಿದೆ. ತೆಲಂಗಾಣ ಪೊಲೀಸರು ಇತ್ತೀಚಗಷ್ಟೇ ನೌಹೀರಾ ಶೇಕ್ ಅವರನ್ನು ಬಂಧಿಸಿದ್ದರು.

ನೌಹೀರಾ ಶೇಖ್ ಮೂಲತಃ ಆಂಧ್ರಪ್ರದೇಶದ ತಿರುಪತಿಯವರು. 1973ರಲ್ಲಿ ಶೇಖ್ ಮೋಹಿಯುದ್ದೀನ್ ಸಾಹೇಬ್ ಕೋಲ್ಕರ್ ಮತ್ತು ಶೇಖ್ ಬಾಲ್ಕಿಜ್ ದಂಪತಿಗೆ ಜನಿಸಿದ ನೌಹೀರಾ, ಸಣ್ಣ ವಯಸ್ಸಿನಲ್ಲೇ ತಂದೆ ನಡೆಸುತ್ತಿದ್ದ ಉದ್ಯಮಗಳಲ್ಲಿ ತೊಡಗಿಕೊಂಡರು. ಇಸ್ಲಾಂ ಧರ್ಮದ ಬಗ್ಗೆ ಆಸಕ್ತಿ ಹೊಂದಿದ್ದ ನೌಹೀರಾ, ಧರ್ಮದ ಬಗ್ಗೆ ಹೆಚ್ಚು ಸಂಶೋಧನೆಗಳನ್ನು ಮಾಡಿದರು. ನಂತರ ಇಸ್ಲಾಂ ವೈಜ್ಞಾನಿಕ ಸಂಶೋಧನೆಯಲ್ಲಿ ಪದವೀಧರೆಯಾದರು. ಜತೆಗೆ, ಇಸ್ಲಾಂ ಕುರಿತಾಗಿ ಮಹಿಳೆಯರಿಗೆ ಪ್ರವಚನವನ್ನೂ ನೌಹೀರಾ ನೀಡುತ್ತಿದ್ದರು. ಕೊಲಂಬೋ ಅಂತಾರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಕೂಡ ನೌಹೀರಾಗೆ ಲಭಿಸಿತ್ತು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

42 minutes ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 hour ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

3 hours ago