ಬೆಂಗಳೂರು : ಹೀರಾ ಗೋಲ್ಡ್ ವಂಚನೆ ಪ್ರಕರಣ ಸಂಬಂಧ ಎಂಇಪಿ ಪಕ್ಷದ ಮುಖ್ಯಸ್ಥೆ ನೌಹೀರಾ ಶೇಕ್ ಅವರಿಗೆ ಸೇರಿದ ಸುಮಾರು 300 ಕೋಟಿ ರೂ.ಗೂ ಅಧಿಕ ಆಸ್ತಿ ಹಾಗೂ ಹಣವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬ್ಯಾಂಕ್ ಗಳಿಗಿಂತ ಅಧಿಕ ಬಡ್ಡಿ ನೀಡುವ ಆಮಿಷ ಒಡ್ಡಿ ಹೀರಾ ಗೋಲ್ಡ್ ಕಂಪನಿ ಹೆಸರಿನಲ್ಲಿ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಜನರಿಗೆ ಸಾವಿರಾರು ಕೋಟಿ ರೂ.ಗಳನ್ನು ನೌಹೀರಾ ಶೇಕ್ ವಂಚನೆ ಮಾಡಿದ್ದರು. ಹೀಗಾಗಿ ಜಾರಿ ನಿರ್ದೇಶನಾಲಯ ಇದೀಗ 300 ಕೊಟಿ ಗೂ ಅಧಿಕ ಆಸ್ತಿ ಮತ್ತು ಹಣವನ್ನು ಜಪ್ತಿ ಮಾಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2014 ರ ಮೇ ತಿಂಗಳಲ್ಲಿ ಹೀರಾ ಸಮೂಹ ಸಂಸ್ಥೆಗಳ ಅಕ್ರಮ ಪತ್ತೆಗಾಗಿ ಆಂದ್ರಪ್ರದೇಶದ ಟೋಲಿ ಚೌಕಿಯಲ್ಲಿರುವ ಕಚೇರಿಯಲ್ಲಿ ಹುಡುಕಾಟ ನಡೆಸಿದ್ದರು. ನಂತರ ಅಧಿಕಾರಿಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಹೀರಾ ಗ್ರೂಪ್ ಭಾರತ ಮತ್ತು ವಿದೇಶಗಳಲ್ಲಿ ಕಂಪನಿಗಳನ್ನು ಹೊಂದಿದೆ. ತೆಲಂಗಾಣ ಪೊಲೀಸರು ಇತ್ತೀಚಗಷ್ಟೇ ನೌಹೀರಾ ಶೇಕ್ ಅವರನ್ನು ಬಂಧಿಸಿದ್ದರು.
ನೌಹೀರಾ ಶೇಖ್ ಮೂಲತಃ ಆಂಧ್ರಪ್ರದೇಶದ ತಿರುಪತಿಯವರು. 1973ರಲ್ಲಿ ಶೇಖ್ ಮೋಹಿಯುದ್ದೀನ್ ಸಾಹೇಬ್ ಕೋಲ್ಕರ್ ಮತ್ತು ಶೇಖ್ ಬಾಲ್ಕಿಜ್ ದಂಪತಿಗೆ ಜನಿಸಿದ ನೌಹೀರಾ, ಸಣ್ಣ ವಯಸ್ಸಿನಲ್ಲೇ ತಂದೆ ನಡೆಸುತ್ತಿದ್ದ ಉದ್ಯಮಗಳಲ್ಲಿ ತೊಡಗಿಕೊಂಡರು. ಇಸ್ಲಾಂ ಧರ್ಮದ ಬಗ್ಗೆ ಆಸಕ್ತಿ ಹೊಂದಿದ್ದ ನೌಹೀರಾ, ಧರ್ಮದ ಬಗ್ಗೆ ಹೆಚ್ಚು ಸಂಶೋಧನೆಗಳನ್ನು ಮಾಡಿದರು. ನಂತರ ಇಸ್ಲಾಂ ವೈಜ್ಞಾನಿಕ ಸಂಶೋಧನೆಯಲ್ಲಿ ಪದವೀಧರೆಯಾದರು. ಜತೆಗೆ, ಇಸ್ಲಾಂ ಕುರಿತಾಗಿ ಮಹಿಳೆಯರಿಗೆ ಪ್ರವಚನವನ್ನೂ ನೌಹೀರಾ ನೀಡುತ್ತಿದ್ದರು. ಕೊಲಂಬೋ ಅಂತಾರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಕೂಡ ನೌಹೀರಾಗೆ ಲಭಿಸಿತ್ತು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…