ಬೆಂಗಳೂರು : ಹೀರಾ ಗೋಲ್ಡ್ ವಂಚನೆ ಪ್ರಕರಣ ಸಂಬಂಧ ಎಂಇಪಿ ಪಕ್ಷದ ಮುಖ್ಯಸ್ಥೆ ನೌಹೀರಾ ಶೇಕ್ ಅವರಿಗೆ ಸೇರಿದ ಸುಮಾರು 300 ಕೋಟಿ ರೂ.ಗೂ ಅಧಿಕ ಆಸ್ತಿ ಹಾಗೂ ಹಣವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬ್ಯಾಂಕ್ ಗಳಿಗಿಂತ ಅಧಿಕ ಬಡ್ಡಿ ನೀಡುವ ಆಮಿಷ ಒಡ್ಡಿ ಹೀರಾ ಗೋಲ್ಡ್ ಕಂಪನಿ ಹೆಸರಿನಲ್ಲಿ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಜನರಿಗೆ ಸಾವಿರಾರು ಕೋಟಿ ರೂ.ಗಳನ್ನು ನೌಹೀರಾ ಶೇಕ್ ವಂಚನೆ ಮಾಡಿದ್ದರು. ಹೀಗಾಗಿ ಜಾರಿ ನಿರ್ದೇಶನಾಲಯ ಇದೀಗ 300 ಕೊಟಿ ಗೂ ಅಧಿಕ ಆಸ್ತಿ ಮತ್ತು ಹಣವನ್ನು ಜಪ್ತಿ ಮಾಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2014 ರ ಮೇ ತಿಂಗಳಲ್ಲಿ ಹೀರಾ ಸಮೂಹ ಸಂಸ್ಥೆಗಳ ಅಕ್ರಮ ಪತ್ತೆಗಾಗಿ ಆಂದ್ರಪ್ರದೇಶದ ಟೋಲಿ ಚೌಕಿಯಲ್ಲಿರುವ ಕಚೇರಿಯಲ್ಲಿ ಹುಡುಕಾಟ ನಡೆಸಿದ್ದರು. ನಂತರ ಅಧಿಕಾರಿಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಹೀರಾ ಗ್ರೂಪ್ ಭಾರತ ಮತ್ತು ವಿದೇಶಗಳಲ್ಲಿ ಕಂಪನಿಗಳನ್ನು ಹೊಂದಿದೆ. ತೆಲಂಗಾಣ ಪೊಲೀಸರು ಇತ್ತೀಚಗಷ್ಟೇ ನೌಹೀರಾ ಶೇಕ್ ಅವರನ್ನು ಬಂಧಿಸಿದ್ದರು.
ನೌಹೀರಾ ಶೇಖ್ ಮೂಲತಃ ಆಂಧ್ರಪ್ರದೇಶದ ತಿರುಪತಿಯವರು. 1973ರಲ್ಲಿ ಶೇಖ್ ಮೋಹಿಯುದ್ದೀನ್ ಸಾಹೇಬ್ ಕೋಲ್ಕರ್ ಮತ್ತು ಶೇಖ್ ಬಾಲ್ಕಿಜ್ ದಂಪತಿಗೆ ಜನಿಸಿದ ನೌಹೀರಾ, ಸಣ್ಣ ವಯಸ್ಸಿನಲ್ಲೇ ತಂದೆ ನಡೆಸುತ್ತಿದ್ದ ಉದ್ಯಮಗಳಲ್ಲಿ ತೊಡಗಿಕೊಂಡರು. ಇಸ್ಲಾಂ ಧರ್ಮದ ಬಗ್ಗೆ ಆಸಕ್ತಿ ಹೊಂದಿದ್ದ ನೌಹೀರಾ, ಧರ್ಮದ ಬಗ್ಗೆ ಹೆಚ್ಚು ಸಂಶೋಧನೆಗಳನ್ನು ಮಾಡಿದರು. ನಂತರ ಇಸ್ಲಾಂ ವೈಜ್ಞಾನಿಕ ಸಂಶೋಧನೆಯಲ್ಲಿ ಪದವೀಧರೆಯಾದರು. ಜತೆಗೆ, ಇಸ್ಲಾಂ ಕುರಿತಾಗಿ ಮಹಿಳೆಯರಿಗೆ ಪ್ರವಚನವನ್ನೂ ನೌಹೀರಾ ನೀಡುತ್ತಿದ್ದರು. ಕೊಲಂಬೋ ಅಂತಾರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಕೂಡ ನೌಹೀರಾಗೆ ಲಭಿಸಿತ್ತು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…