ಬೆಂಗಳೂರು : ಹೀರಾ ಗೋಲ್ಡ್ ವಂಚನೆ ಪ್ರಕರಣ ಸಂಬಂಧ ಎಂಇಪಿ ಪಕ್ಷದ ಮುಖ್ಯಸ್ಥೆ ನೌಹೀರಾ ಶೇಕ್ ಅವರಿಗೆ ಸೇರಿದ ಸುಮಾರು 300 ಕೋಟಿ ರೂ.ಗೂ ಅಧಿಕ ಆಸ್ತಿ ಹಾಗೂ ಹಣವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬ್ಯಾಂಕ್ ಗಳಿಗಿಂತ ಅಧಿಕ ಬಡ್ಡಿ ನೀಡುವ ಆಮಿಷ ಒಡ್ಡಿ ಹೀರಾ ಗೋಲ್ಡ್ ಕಂಪನಿ ಹೆಸರಿನಲ್ಲಿ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಜನರಿಗೆ ಸಾವಿರಾರು ಕೋಟಿ ರೂ.ಗಳನ್ನು ನೌಹೀರಾ ಶೇಕ್ ವಂಚನೆ ಮಾಡಿದ್ದರು. ಹೀಗಾಗಿ ಜಾರಿ ನಿರ್ದೇಶನಾಲಯ ಇದೀಗ 300 ಕೊಟಿ ಗೂ ಅಧಿಕ ಆಸ್ತಿ ಮತ್ತು ಹಣವನ್ನು ಜಪ್ತಿ ಮಾಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2014 ರ ಮೇ ತಿಂಗಳಲ್ಲಿ ಹೀರಾ ಸಮೂಹ ಸಂಸ್ಥೆಗಳ ಅಕ್ರಮ ಪತ್ತೆಗಾಗಿ ಆಂದ್ರಪ್ರದೇಶದ ಟೋಲಿ ಚೌಕಿಯಲ್ಲಿರುವ ಕಚೇರಿಯಲ್ಲಿ ಹುಡುಕಾಟ ನಡೆಸಿದ್ದರು. ನಂತರ ಅಧಿಕಾರಿಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಹೀರಾ ಗ್ರೂಪ್ ಭಾರತ ಮತ್ತು ವಿದೇಶಗಳಲ್ಲಿ ಕಂಪನಿಗಳನ್ನು ಹೊಂದಿದೆ. ತೆಲಂಗಾಣ ಪೊಲೀಸರು ಇತ್ತೀಚಗಷ್ಟೇ ನೌಹೀರಾ ಶೇಕ್ ಅವರನ್ನು ಬಂಧಿಸಿದ್ದರು.
ನೌಹೀರಾ ಶೇಖ್ ಮೂಲತಃ ಆಂಧ್ರಪ್ರದೇಶದ ತಿರುಪತಿಯವರು. 1973ರಲ್ಲಿ ಶೇಖ್ ಮೋಹಿಯುದ್ದೀನ್ ಸಾಹೇಬ್ ಕೋಲ್ಕರ್ ಮತ್ತು ಶೇಖ್ ಬಾಲ್ಕಿಜ್ ದಂಪತಿಗೆ ಜನಿಸಿದ ನೌಹೀರಾ, ಸಣ್ಣ ವಯಸ್ಸಿನಲ್ಲೇ ತಂದೆ ನಡೆಸುತ್ತಿದ್ದ ಉದ್ಯಮಗಳಲ್ಲಿ ತೊಡಗಿಕೊಂಡರು. ಇಸ್ಲಾಂ ಧರ್ಮದ ಬಗ್ಗೆ ಆಸಕ್ತಿ ಹೊಂದಿದ್ದ ನೌಹೀರಾ, ಧರ್ಮದ ಬಗ್ಗೆ ಹೆಚ್ಚು ಸಂಶೋಧನೆಗಳನ್ನು ಮಾಡಿದರು. ನಂತರ ಇಸ್ಲಾಂ ವೈಜ್ಞಾನಿಕ ಸಂಶೋಧನೆಯಲ್ಲಿ ಪದವೀಧರೆಯಾದರು. ಜತೆಗೆ, ಇಸ್ಲಾಂ ಕುರಿತಾಗಿ ಮಹಿಳೆಯರಿಗೆ ಪ್ರವಚನವನ್ನೂ ನೌಹೀರಾ ನೀಡುತ್ತಿದ್ದರು. ಕೊಲಂಬೋ ಅಂತಾರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಕೂಡ ನೌಹೀರಾಗೆ ಲಭಿಸಿತ್ತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…