Featured

ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ -Vishwanews24

ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ -Vishwanews24

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪಾಲಿಗೆ ಇಂದು ವಿಶೇಷವಾದ ದಿನ. ಕೋಟ್ಯಂತರ ಅಭಿಮಾನಿಗಳ ಅಭಿಮಾನಿ ಅಭಿನಯ ಚಕ್ರವರ್ತಿಗೆ ಇಂದು (ಸೆಪ್ಟಂಬರ್ 2) ಹುಟ್ಟುಹಬ್ಬದ ಸಂಭ್ರಮ. 47ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಈ ಬಾರಿ ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಪ್ರತೀ ವರ್ಷ ಹುಟ್ಟುಹಬ್ಬದ ದಿನ ಕಿಚ್ಚನ ಮನೆ ಮುಂದೆ ಅಭಿಮಾನಿಗಳ ದೊಡ್ಡ ದಂಡೇ ನೆರೆದಿರುತ್ತಿತ್ತು. ರಾಜ್ಯದ ಮೂಲೆ ಮೂಲೆಯಿಂದ ಬಂದ ಅಭಿಮಾನಿಗಳು ರಾತ್ರಿಯಿಂದಲೇ ಸುದೀಪ್ ಮನೆ ಮುಂದೆ ಕ್ಯೂ ನಿಂತಿರುತ್ತಿದ್ದರು. ನೆಚ್ಚಿನ ನಟನ ದರ್ಶನ ಮಾಡಿ, ಶುಭಹಾರೈಸಿ ಸಂತಸ ಪಡುತ್ತಿದ್ದರು.

ಅಭಿಮಾನಿಗಳೊಂದಿಗೆ ಸುದೀಪ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಎಲ್ಲಾ ಸಂಭ್ರಮ, ಸಡಗರಗಳಿಗೆ ಬ್ರೇಕ್ ಬಿದ್ದಿದೆ. ಸಾಮಾಜಿಕ ಜಾಲತಾಣದ ಮೂಲಕವೇ ಎಲ್ಲರೂ ಶುಭ ಹಾರೈಸುತ್ತಿದ್ದಾರೆ. ಅಭಿಮಾನಿಗಳು, ಚಿತ್ರರಂಗದ ಗಣ್ಯರು ಮತ್ತು ಸ್ನೇಹಿತರು ಕಿಚ್ಚನಿಗೆ ವಿಶ್ ಮಾಡುತ್ತಿದ್ದಾರೆ.

‘ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಯಾರು ಮನೆಯ ಬಳಿ ಬರಬೇಡಿ, ಸಂಭ್ರಮದ ಹುಟ್ಟುಹಬ್ಬ ಆಚರಿಸುವುದು ಬೇಡ. ನೀವು ಇದ್ದಲ್ಲಿಂದನೇ ಶುಭ ಹಾರೈಸಿ’ ಎಂದು ಸುದೀಪ್ ಟ್ವೀಟ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ನಿಮ್ಮ ಶುಭಾಶಯಗಳು ನನಗೆ ಮುಖ್ಯವಾದದ್ದೇ ಹಾಗೂ ನಾನು ಹೇಳಿದಂತೆ ಬೃಹತ್ ಸಂಖ್ಯೆಯಲ್ಲಿ ಬರುವ ನಿಮ್ಮನ್ನು ಕಾಣುವ ಸಂತೋಷವನ್ನು ಬೇರೆ ಯಾವುದೂ ನನಗೆ ನೀಡುವುದಿಲ್ಲ. ನಾನು ಖಚಿತವಾಗಿ ಹೇಳುತ್ತೇನೆ ಬಹಳ ಬೇಗ ಆ ದಿನವೂ ಬರುತ್ತದೆ ಹಾಗೂ ನಾವು ಮತ್ತೆ ಭೇಟಿಯಾಗುತ್ತೇವೆ. ಆದರೆ ಸದ್ಯಕ್ಕೆ ನಿಮ್ಮಲ್ಲಿ ಕೋರುವುದೇನೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಎಲ್ಲೂ ಹುಟ್ಟುಹಬ್ಬ ಆಚರಿಸಬೇಡಿ. ಯಾವುದೇ ಸಂಭ್ರಮಾಚರಣೆ ಹಾಗೂ ಕಾರ್ಯಕ್ರಮಗಳು ಬೇಡ. ಸಾಧ್ಯವಾದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದ ಕೆಲವರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

13 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

23 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

40 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

45 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

52 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago