Featured

ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ -Vishwanews24

ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ -Vishwanews24

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪಾಲಿಗೆ ಇಂದು ವಿಶೇಷವಾದ ದಿನ. ಕೋಟ್ಯಂತರ ಅಭಿಮಾನಿಗಳ ಅಭಿಮಾನಿ ಅಭಿನಯ ಚಕ್ರವರ್ತಿಗೆ ಇಂದು (ಸೆಪ್ಟಂಬರ್ 2) ಹುಟ್ಟುಹಬ್ಬದ ಸಂಭ್ರಮ. 47ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಈ ಬಾರಿ ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಪ್ರತೀ ವರ್ಷ ಹುಟ್ಟುಹಬ್ಬದ ದಿನ ಕಿಚ್ಚನ ಮನೆ ಮುಂದೆ ಅಭಿಮಾನಿಗಳ ದೊಡ್ಡ ದಂಡೇ ನೆರೆದಿರುತ್ತಿತ್ತು. ರಾಜ್ಯದ ಮೂಲೆ ಮೂಲೆಯಿಂದ ಬಂದ ಅಭಿಮಾನಿಗಳು ರಾತ್ರಿಯಿಂದಲೇ ಸುದೀಪ್ ಮನೆ ಮುಂದೆ ಕ್ಯೂ ನಿಂತಿರುತ್ತಿದ್ದರು. ನೆಚ್ಚಿನ ನಟನ ದರ್ಶನ ಮಾಡಿ, ಶುಭಹಾರೈಸಿ ಸಂತಸ ಪಡುತ್ತಿದ್ದರು.

ಅಭಿಮಾನಿಗಳೊಂದಿಗೆ ಸುದೀಪ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಎಲ್ಲಾ ಸಂಭ್ರಮ, ಸಡಗರಗಳಿಗೆ ಬ್ರೇಕ್ ಬಿದ್ದಿದೆ. ಸಾಮಾಜಿಕ ಜಾಲತಾಣದ ಮೂಲಕವೇ ಎಲ್ಲರೂ ಶುಭ ಹಾರೈಸುತ್ತಿದ್ದಾರೆ. ಅಭಿಮಾನಿಗಳು, ಚಿತ್ರರಂಗದ ಗಣ್ಯರು ಮತ್ತು ಸ್ನೇಹಿತರು ಕಿಚ್ಚನಿಗೆ ವಿಶ್ ಮಾಡುತ್ತಿದ್ದಾರೆ.

‘ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಯಾರು ಮನೆಯ ಬಳಿ ಬರಬೇಡಿ, ಸಂಭ್ರಮದ ಹುಟ್ಟುಹಬ್ಬ ಆಚರಿಸುವುದು ಬೇಡ. ನೀವು ಇದ್ದಲ್ಲಿಂದನೇ ಶುಭ ಹಾರೈಸಿ’ ಎಂದು ಸುದೀಪ್ ಟ್ವೀಟ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ನಿಮ್ಮ ಶುಭಾಶಯಗಳು ನನಗೆ ಮುಖ್ಯವಾದದ್ದೇ ಹಾಗೂ ನಾನು ಹೇಳಿದಂತೆ ಬೃಹತ್ ಸಂಖ್ಯೆಯಲ್ಲಿ ಬರುವ ನಿಮ್ಮನ್ನು ಕಾಣುವ ಸಂತೋಷವನ್ನು ಬೇರೆ ಯಾವುದೂ ನನಗೆ ನೀಡುವುದಿಲ್ಲ. ನಾನು ಖಚಿತವಾಗಿ ಹೇಳುತ್ತೇನೆ ಬಹಳ ಬೇಗ ಆ ದಿನವೂ ಬರುತ್ತದೆ ಹಾಗೂ ನಾವು ಮತ್ತೆ ಭೇಟಿಯಾಗುತ್ತೇವೆ. ಆದರೆ ಸದ್ಯಕ್ಕೆ ನಿಮ್ಮಲ್ಲಿ ಕೋರುವುದೇನೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಎಲ್ಲೂ ಹುಟ್ಟುಹಬ್ಬ ಆಚರಿಸಬೇಡಿ. ಯಾವುದೇ ಸಂಭ್ರಮಾಚರಣೆ ಹಾಗೂ ಕಾರ್ಯಕ್ರಮಗಳು ಬೇಡ. ಸಾಧ್ಯವಾದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದ ಕೆಲವರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago