ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪಾಲಿಗೆ ಇಂದು ವಿಶೇಷವಾದ ದಿನ. ಕೋಟ್ಯಂತರ ಅಭಿಮಾನಿಗಳ ಅಭಿಮಾನಿ ಅಭಿನಯ ಚಕ್ರವರ್ತಿಗೆ ಇಂದು (ಸೆಪ್ಟಂಬರ್ 2) ಹುಟ್ಟುಹಬ್ಬದ ಸಂಭ್ರಮ. 47ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಈ ಬಾರಿ ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಪ್ರತೀ ವರ್ಷ ಹುಟ್ಟುಹಬ್ಬದ ದಿನ ಕಿಚ್ಚನ ಮನೆ ಮುಂದೆ ಅಭಿಮಾನಿಗಳ ದೊಡ್ಡ ದಂಡೇ ನೆರೆದಿರುತ್ತಿತ್ತು. ರಾಜ್ಯದ ಮೂಲೆ ಮೂಲೆಯಿಂದ ಬಂದ ಅಭಿಮಾನಿಗಳು ರಾತ್ರಿಯಿಂದಲೇ ಸುದೀಪ್ ಮನೆ ಮುಂದೆ ಕ್ಯೂ ನಿಂತಿರುತ್ತಿದ್ದರು. ನೆಚ್ಚಿನ ನಟನ ದರ್ಶನ ಮಾಡಿ, ಶುಭಹಾರೈಸಿ ಸಂತಸ ಪಡುತ್ತಿದ್ದರು.
ಅಭಿಮಾನಿಗಳೊಂದಿಗೆ ಸುದೀಪ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಎಲ್ಲಾ ಸಂಭ್ರಮ, ಸಡಗರಗಳಿಗೆ ಬ್ರೇಕ್ ಬಿದ್ದಿದೆ. ಸಾಮಾಜಿಕ ಜಾಲತಾಣದ ಮೂಲಕವೇ ಎಲ್ಲರೂ ಶುಭ ಹಾರೈಸುತ್ತಿದ್ದಾರೆ. ಅಭಿಮಾನಿಗಳು, ಚಿತ್ರರಂಗದ ಗಣ್ಯರು ಮತ್ತು ಸ್ನೇಹಿತರು ಕಿಚ್ಚನಿಗೆ ವಿಶ್ ಮಾಡುತ್ತಿದ್ದಾರೆ.
‘ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಯಾರು ಮನೆಯ ಬಳಿ ಬರಬೇಡಿ, ಸಂಭ್ರಮದ ಹುಟ್ಟುಹಬ್ಬ ಆಚರಿಸುವುದು ಬೇಡ. ನೀವು ಇದ್ದಲ್ಲಿಂದನೇ ಶುಭ ಹಾರೈಸಿ’ ಎಂದು ಸುದೀಪ್ ಟ್ವೀಟ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ನಿಮ್ಮ ಶುಭಾಶಯಗಳು ನನಗೆ ಮುಖ್ಯವಾದದ್ದೇ ಹಾಗೂ ನಾನು ಹೇಳಿದಂತೆ ಬೃಹತ್ ಸಂಖ್ಯೆಯಲ್ಲಿ ಬರುವ ನಿಮ್ಮನ್ನು ಕಾಣುವ ಸಂತೋಷವನ್ನು ಬೇರೆ ಯಾವುದೂ ನನಗೆ ನೀಡುವುದಿಲ್ಲ. ನಾನು ಖಚಿತವಾಗಿ ಹೇಳುತ್ತೇನೆ ಬಹಳ ಬೇಗ ಆ ದಿನವೂ ಬರುತ್ತದೆ ಹಾಗೂ ನಾವು ಮತ್ತೆ ಭೇಟಿಯಾಗುತ್ತೇವೆ. ಆದರೆ ಸದ್ಯಕ್ಕೆ ನಿಮ್ಮಲ್ಲಿ ಕೋರುವುದೇನೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಎಲ್ಲೂ ಹುಟ್ಟುಹಬ್ಬ ಆಚರಿಸಬೇಡಿ. ಯಾವುದೇ ಸಂಭ್ರಮಾಚರಣೆ ಹಾಗೂ ಕಾರ್ಯಕ್ರಮಗಳು ಬೇಡ. ಸಾಧ್ಯವಾದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದ ಕೆಲವರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…