ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪಾಲಿಗೆ ಇಂದು ವಿಶೇಷವಾದ ದಿನ. ಕೋಟ್ಯಂತರ ಅಭಿಮಾನಿಗಳ ಅಭಿಮಾನಿ ಅಭಿನಯ ಚಕ್ರವರ್ತಿಗೆ ಇಂದು (ಸೆಪ್ಟಂಬರ್ 2) ಹುಟ್ಟುಹಬ್ಬದ ಸಂಭ್ರಮ. 47ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಈ ಬಾರಿ ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಪ್ರತೀ ವರ್ಷ ಹುಟ್ಟುಹಬ್ಬದ ದಿನ ಕಿಚ್ಚನ ಮನೆ ಮುಂದೆ ಅಭಿಮಾನಿಗಳ ದೊಡ್ಡ ದಂಡೇ ನೆರೆದಿರುತ್ತಿತ್ತು. ರಾಜ್ಯದ ಮೂಲೆ ಮೂಲೆಯಿಂದ ಬಂದ ಅಭಿಮಾನಿಗಳು ರಾತ್ರಿಯಿಂದಲೇ ಸುದೀಪ್ ಮನೆ ಮುಂದೆ ಕ್ಯೂ ನಿಂತಿರುತ್ತಿದ್ದರು. ನೆಚ್ಚಿನ ನಟನ ದರ್ಶನ ಮಾಡಿ, ಶುಭಹಾರೈಸಿ ಸಂತಸ ಪಡುತ್ತಿದ್ದರು.
ಅಭಿಮಾನಿಗಳೊಂದಿಗೆ ಸುದೀಪ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಎಲ್ಲಾ ಸಂಭ್ರಮ, ಸಡಗರಗಳಿಗೆ ಬ್ರೇಕ್ ಬಿದ್ದಿದೆ. ಸಾಮಾಜಿಕ ಜಾಲತಾಣದ ಮೂಲಕವೇ ಎಲ್ಲರೂ ಶುಭ ಹಾರೈಸುತ್ತಿದ್ದಾರೆ. ಅಭಿಮಾನಿಗಳು, ಚಿತ್ರರಂಗದ ಗಣ್ಯರು ಮತ್ತು ಸ್ನೇಹಿತರು ಕಿಚ್ಚನಿಗೆ ವಿಶ್ ಮಾಡುತ್ತಿದ್ದಾರೆ.
‘ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಯಾರು ಮನೆಯ ಬಳಿ ಬರಬೇಡಿ, ಸಂಭ್ರಮದ ಹುಟ್ಟುಹಬ್ಬ ಆಚರಿಸುವುದು ಬೇಡ. ನೀವು ಇದ್ದಲ್ಲಿಂದನೇ ಶುಭ ಹಾರೈಸಿ’ ಎಂದು ಸುದೀಪ್ ಟ್ವೀಟ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ನಿಮ್ಮ ಶುಭಾಶಯಗಳು ನನಗೆ ಮುಖ್ಯವಾದದ್ದೇ ಹಾಗೂ ನಾನು ಹೇಳಿದಂತೆ ಬೃಹತ್ ಸಂಖ್ಯೆಯಲ್ಲಿ ಬರುವ ನಿಮ್ಮನ್ನು ಕಾಣುವ ಸಂತೋಷವನ್ನು ಬೇರೆ ಯಾವುದೂ ನನಗೆ ನೀಡುವುದಿಲ್ಲ. ನಾನು ಖಚಿತವಾಗಿ ಹೇಳುತ್ತೇನೆ ಬಹಳ ಬೇಗ ಆ ದಿನವೂ ಬರುತ್ತದೆ ಹಾಗೂ ನಾವು ಮತ್ತೆ ಭೇಟಿಯಾಗುತ್ತೇವೆ. ಆದರೆ ಸದ್ಯಕ್ಕೆ ನಿಮ್ಮಲ್ಲಿ ಕೋರುವುದೇನೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಎಲ್ಲೂ ಹುಟ್ಟುಹಬ್ಬ ಆಚರಿಸಬೇಡಿ. ಯಾವುದೇ ಸಂಭ್ರಮಾಚರಣೆ ಹಾಗೂ ಕಾರ್ಯಕ್ರಮಗಳು ಬೇಡ. ಸಾಧ್ಯವಾದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದ ಕೆಲವರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…