ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ಆರತಿ ಬೆಳಗಿದ್ದಾರೆ.
ಸರ್ದಾರ್ ಸರೋವರದ್ದ ಬಳಿ ಇರುವ ಏಕ್ತಾ ನರ್ಸರಿಗೆ ತೆರಳಿ ಅಲ್ಲಿನ ಪರಿಸರ ಸ್ನೇಹಿ ವಸ್ತುಗಳನ್ನು ನೋಡಿದರು. ಅಲ್ಲದೆ ಕ್ಯಾಕ್ಟಸ್ ಉದ್ಯಾನವನಕ್ಕೆ ಭೇಟಿ ನೀಡಿದರು. ನಂತರ ನರ್ಮದಾ ಜಿಲ್ಲೆಯ ಗುರುಡೇಶ್ವರ ದತ್ತ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿಯವರು ಬಣ್ಣ, ಬಣ್ಣದ ಚಿಟ್ಟೆಗಳನ್ನು ಹಾರಿಸುವ ಮೂಲಕ ಸಂಭ್ರಮಿಸಿದ್ದು, ಬಳಿಕ ಸರ್ದಾರ್ ಸರೋವರ ಅಣೆಕಟ್ಟನ್ನು ವೀಕ್ಷಣೆ ಮಾಡಿದರು. ಈ ವೇಳೆ ಪ್ರಧಾನಿ ಮೋದಿ ಅವರು ಪ್ರಥಮ ಪೂರ್ಣವೈಭವ ವೀಕ್ಷಿಸಿದ್ದಾರೆ.
1961, ಏಪ್ರಿಲ್ 5ರಂದು ಸರ್ದಾರ್ ಸರೋವರ ಅಣೆಕಟ್ಟೆ ನಿರ್ಮಾಣಕ್ಕೆ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅಡಿಗಲ್ಲುನೆಟ್ಟಿದ್ದರು. ಅದಾಗಿ ಹಲವು ಅಡೆತಡೆಗಳಿಂದ ವಿಳಂಬಗೊಂಡಿದ್ದ ಕಾಮಗಾರಿ 56 ವರ್ಷಗಳ ಬಳಿಕ, 2017ರಲ್ಲಿಪೂರ್ಣಗೊಂಡಿತ್ತು. 2018ರಲ್ಲಿಮಳೆ ಕೊರತೆ ಕಾರಣ ಅಣೆಕಟ್ಟೆ ತುಂಬಿರಲಿಲ್ಲ. ಈ ವರ್ಷ ಸಮೃದ್ಧ ಮಳೆಯಿಂದ ಮೊದಲ ಬಾರಿ ಭರ್ತಿಯಾಗಿದೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…