ಮಂಗಳೂರು : ಹುಡುಗಿಯ ವೇಷ ಧರಿಸಿ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉರ್ವ ಪೊಲೀಸ್ ರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ನಿವಾಸಿಗಳಾದ ಆದಿತ್ಯ, ಹಾಗೂ ಅರುಣ್ ಎಚ್ ಎಸ್ ಎಂದು ಗುರುತಿಸಲಾಗಿದೆ.
ದೂರುದಾರರನ್ನು ಬೆಂಗಳೂರು ಮೂಲದ ಆರಾಧ್ಯ ಎಂಬ ಹೆಂಗಸಿನ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡಿರುತ್ತಾರೆ. ದೂರುದಾರರು ಆರೋಪಿಯ ಬೇಡಿಕೆಯಂತೆ ತಮ್ಮ ಭಾವಚಿತ್ರವನ್ನು ಕಳುಹಿಸಿಕೊಟ್ಟಿದ್ದು, ಈ ಭಾವಚಿತ್ರವನ್ನು ಪಡೆದುಕೊಂಡ ಆರೋಪಿ ಪೊಲೀಸರಿಗೆ ದೂರು ನೀಡಿ ಜೈಲಿಗೆ ಕಳುಹಿಸುವುದಾಗಿ ಬ್ಲಾಕ್ ಮೇಲ್ ಮಾಡಿ ಫಿರ್ಯಾಧಿದಾರರಿಂದ ರೂ 65,000/- ಹಣವನ್ನು ಬೆಂಗಳೂರಿನ ಯಶವಂತಪುರದಲ್ಲಿ ಪಡೆದುಕೊಂಡಿರುತ್ತಾರೆ.
ನಂತರದಲ್ಲಿ ಪದೇ ಪದೇ ಫೋನ್ ಮಾಡಿ ಹೆಚ್ಚಿನ ಹಣಕ್ಕಾಗಿ ಪೀಡಿಸುತ್ತಿರುವ ಹಿನ್ನಲೆಯಲ್ಲಿ ಬಗ್ಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುವ ಸಮಯ ಆರೋಪಿಗಳು ಫಿರ್ಯಾಧಿದಾರರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ಹಾಗೂ ರಾಜಕಾರಣಿಗಳ ಸೋಗಿನಲ್ಲಿ ಕರೆ ಮಾಡಿ ಹೆದರಿಸಿರುತ್ತಾರೆ.
ಪ್ರಕರಣದ ಆರೋಪಿಗಳನ್ನು ಖಚಿತ ಮಾಹಿತಿ ಆಧಾರದ ಮೇಲೆ ಬೆಂಗಳೂರಿನ ಕೊಲಂಬಿಯಾ ಆಸ್ಪತ್ರೆ ಬಳಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಆರಾಧ್ಯ ಎಂಬ ಹೆಸರಿನಲ್ಲಿ ಪರಿಚಯ ಮಾಡಿಕೊಂಡಿದ್ದಾಕೆ ಪುರುಷ ವ್ಯಕ್ತಿ ಎಂಬುದು ದಸ್ತಗಿರಿ ಸಮಯ ತಿಳಿದು ಬಂದಿದ್ದು, ಹೆಂಗಸಿನ ವೇಷ ಧರಿಸಿ ಫಿರ್ಯಾಧಿದಾರರನ್ನು ನಂಬಿಸಿ ಬ್ಲಾಕ್ ಮೇಲ್ ಮಾಡಿರುತ್ತಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…