ಮಂಗಳೂರು : ಹುಡುಗಿಯ ವೇಷ ಧರಿಸಿ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉರ್ವ ಪೊಲೀಸ್ ರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ನಿವಾಸಿಗಳಾದ ಆದಿತ್ಯ, ಹಾಗೂ ಅರುಣ್ ಎಚ್ ಎಸ್ ಎಂದು ಗುರುತಿಸಲಾಗಿದೆ.
ದೂರುದಾರರನ್ನು ಬೆಂಗಳೂರು ಮೂಲದ ಆರಾಧ್ಯ ಎಂಬ ಹೆಂಗಸಿನ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡಿರುತ್ತಾರೆ. ದೂರುದಾರರು ಆರೋಪಿಯ ಬೇಡಿಕೆಯಂತೆ ತಮ್ಮ ಭಾವಚಿತ್ರವನ್ನು ಕಳುಹಿಸಿಕೊಟ್ಟಿದ್ದು, ಈ ಭಾವಚಿತ್ರವನ್ನು ಪಡೆದುಕೊಂಡ ಆರೋಪಿ ಪೊಲೀಸರಿಗೆ ದೂರು ನೀಡಿ ಜೈಲಿಗೆ ಕಳುಹಿಸುವುದಾಗಿ ಬ್ಲಾಕ್ ಮೇಲ್ ಮಾಡಿ ಫಿರ್ಯಾಧಿದಾರರಿಂದ ರೂ 65,000/- ಹಣವನ್ನು ಬೆಂಗಳೂರಿನ ಯಶವಂತಪುರದಲ್ಲಿ ಪಡೆದುಕೊಂಡಿರುತ್ತಾರೆ.
ನಂತರದಲ್ಲಿ ಪದೇ ಪದೇ ಫೋನ್ ಮಾಡಿ ಹೆಚ್ಚಿನ ಹಣಕ್ಕಾಗಿ ಪೀಡಿಸುತ್ತಿರುವ ಹಿನ್ನಲೆಯಲ್ಲಿ ಬಗ್ಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುವ ಸಮಯ ಆರೋಪಿಗಳು ಫಿರ್ಯಾಧಿದಾರರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ಹಾಗೂ ರಾಜಕಾರಣಿಗಳ ಸೋಗಿನಲ್ಲಿ ಕರೆ ಮಾಡಿ ಹೆದರಿಸಿರುತ್ತಾರೆ.
ಪ್ರಕರಣದ ಆರೋಪಿಗಳನ್ನು ಖಚಿತ ಮಾಹಿತಿ ಆಧಾರದ ಮೇಲೆ ಬೆಂಗಳೂರಿನ ಕೊಲಂಬಿಯಾ ಆಸ್ಪತ್ರೆ ಬಳಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಆರಾಧ್ಯ ಎಂಬ ಹೆಸರಿನಲ್ಲಿ ಪರಿಚಯ ಮಾಡಿಕೊಂಡಿದ್ದಾಕೆ ಪುರುಷ ವ್ಯಕ್ತಿ ಎಂಬುದು ದಸ್ತಗಿರಿ ಸಮಯ ತಿಳಿದು ಬಂದಿದ್ದು, ಹೆಂಗಸಿನ ವೇಷ ಧರಿಸಿ ಫಿರ್ಯಾಧಿದಾರರನ್ನು ನಂಬಿಸಿ ಬ್ಲಾಕ್ ಮೇಲ್ ಮಾಡಿರುತ್ತಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…