ನವದೆಹಲಿ: ತಮಿಳುನಾಡಿನ ಊಟಿಯಲ್ಲಿ ನಡೆದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಬಿಪಿನ್ ರಾವತ್ ಅವರ ಪಾರ್ಥಿವ ಶರೀರವನ್ನು ಕೆಲಹೊತ್ತಿನಲ್ಲೇ ದೆಹಲಿಗೆ ರವಾನಿಸಲಾಗುತ್ತದೆ.
ತಮಿಳುನಾಡಿನ ಊಟದಲ್ಲಿ ನಡೆದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 13 ಜನ ಬುಧವಾರ ಸಾವನ್ನಪ್ಪಿದ್ದರು. ಸದ್ಯ ಹುತಾತ್ಮ ಯೋಧರಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಅವರು ವೆಲ್ಲಿಂಗ್ಟನ್ ಸೇನಾ ಕ್ಯಾಂಪಸ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದರು.
ಇದೀಗ ಬಿಪಿನ್ ರಾವತ್ ಅವರ ಪಾರ್ಥೀವ ಶರೀರವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲು, ಮಿಲಿಟರಿ ಆಸ್ಪತ್ರೆಯಿಂದ ಸೂಳೂರು ವಾಯುನೆಲೆಗೆ ರವಾನಿಸಲಾಗುತ್ತದೆ. ಬಳಿಕ ಸೇನಾ ವಿಮಾನದಲ್ಲಿ ಸೂಳೂರಿನಿಂದ ದೆಹಲಿಗೆ ರವಾನಿಸಲಾಗುತ್ತಿದೆ.
ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತಿದೆ. ಸೇನಾ ವಿಮಾನದಲ್ಲಿ ರಾವತ್, ಪತ್ನಿ ಮೃತದೇಹ ದೆಹಲಿಗೆ ರವಾನೆಯಾಗಲಿದೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ದೆಹಲಿಯ ರಾವತ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಳಿಕ ಕಾಮ್ರಾಜ್ ಮಾರ್ಗದಿಂದ ಅಂತಿಮಯಾತ್ರೆ ನಡೆಯಲಿದ್ದು, ದೆಹಲಿ ಕಂಟೋನ್ಮೆಂಟ್ನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…