ಬೆಂಗಳೂರು: ಬುಧವಾರ ರಜೌರಿ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಅವರ ಕುಟುಂಬಕ್ಕೆ ಮುಖ್ಯಮಂತ್ರಿಸಿದ್ದರಾಮಯ್ಯ ಅವರು 50 ಲಕ್ಷ ರೂ ಪರಿಹಾರ ಘೋಷಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ, ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು.
ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…