Featured

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಗೂಂಡಾರಾಜ್ಯವಾಗಿದೆ : ಉಡುಪಿಯಲ್ಲಿ ನಳಿನ್ ಕುಮಾರ್ ಕಟೀಲ್ – vishwanews24

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಗೂಂಡಾರಾಜ್ಯವಾಗಿದೆ : ಉಡುಪಿಯಲ್ಲಿ ನಳಿನ್ ಕುಮಾರ್ ಕಟೀಲ್

ಉಡುಪಿ: ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಗೂಂಡಾರಾಜ್ಯವಾಗಿದೆ.ಸರ್ಕಾರ ಬಂದಾಲೇ ಪಾಕಿಸ್ತಾನ ಕರ ಘೋಷಣೆ ಆಯಿತು. ವಿಜಯೋತ್ಸವದಲ್ಲಿ ಪಾಕಿಸ್ತಾನ ಧ್ವಜ ಹಾರಿತು.ಬೆಳಗಾಂನಲ್ಲಿ ಒಬ್ಬ ಮುನಿಯ ಹತ್ಯೆ ಆಯಿತು.ಹಲ್ಲೆ ಗೂಂಡಾ ಪ್ರವರ್ತನೆಗಳು ನಿತ್ಯ ನಿರಂತರವಾಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದ ಒಳಗೆ ಪಾಕಿಸ್ತಾನಕ್ಕೆ ಜಯಕಾರ ಹಾಕಿದವರನ್ನು ಬಂಧನ ಮಾಡಲು ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಅತ್ಯಾಚಾರಗಳು ಜಾಸ್ತಿ ಆಗುತ್ತಿವೆ.ಕೆಡಿಪಿ ಸಭೆಯಲ್ಲಿ ನಮ್ಮ ಶಾಸಕರ ಮೇಲೆ ಕಾಂಗ್ರೆಸ್ ಶಾಸಕರು ಕೈ ಎತ್ತುತ್ತಾರೆ. ಬಳ್ಳಾರಿಯಲಿ ಗುಂಡು ಹೊಡೆಯುತ್ತಾರೆ.ಶಾಸಕರ ಸಹವರ್ತಿ ಅವರದ್ದೇ ಕಾರ್ಯಕರ್ತನನ್ನು ಕೊಲ್ಲುತ್ತಾರೆ.ಇದು ಕಾಂಗ್ರೆಸ್ ಸರಕಾರದ ಮಾನಸಿಕತೆಯನ್ನು ತೋರಿಸುತ್ತದೆ.ಈ ಎಲ್ಲಾ ಕೃತ್ಯಗಳನ್ನು ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಸಮರ್ಥನೆ ಮಾಡುತ್ತಾರೆ.ರಾಮರಾಜ್ಯ ಗಾಂಧಿಯ ಕನಸು ನನಸಾಗಿಲ್ಲ, ಇದು ರಾವಣ ರಾಜ್ಯ.ಕರ್ನಾಟಕ ಲಂಕಾಪುರ ಆಗುತ್ತಿದೆ.ರಾವಣನು ಕೂಡ ಸಿದ್ದರಾಮಯ್ಯನಂತೆ ಬುದ್ಧಿವಂತನಿದ್ದ. ರಾವಣ ಕೂಡ ಸಿದ್ದರಾಮಯ್ಯನವರಂತೆ ಅದ್ಭುತ ಜ್ಞಾನಿಯಾಗಿದ್ದ.ಸಿದ್ದರಾಮಯ್ಯನವರ ಹೆಸರು ಬದಲಾವಣೆ ಯಾಗುತ್ತಿದೆಯಾ ಸಂಶಯ. ನಮ್ಮಲ್ಲೂ ಸೀತೆಯ ಅಪಹರಣವಾಗುತ್ತಿದೆ,ಸೀತೆಯ ಮೇಲೆ ಹಲ್ಲೆಗಳು ನಡೆಯುತ್ತಿದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

9 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

16 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

32 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

55 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

22 hours ago