ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧ : ಪ್ರಮೋದ್ ಮುತಾಲಿಕ್ ಸೇರಿ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ – Vishwanews24
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧ : ಪ್ರಮೋದ್ ಮುತಾಲಿಕ್ ಸೇರಿ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮುತ್ತಿಗೆ ಹಾಕಲು ಆಗಮಿಸಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಮುತ್ತಿಗೆ ಹಾಕಲು ಮೈದಾನದ ಬಳಿಯಿರುವ ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ ಸಂದರ್ಭ ಪೊಲೀಸರು ತಡೆದರು. ಅವರದೇ ಕಾರಿನಲ್ಲಿ ವಶಕ್ಕೆ ಪಡೆದು ಸಿಎಆರ್ ಮೈದಾನಕ್ಕೆ ಕರೆದುಕೊಂಡು ಹೋಗಲಾಯಿತು. ಇದೇ ಸಂದರ್ಭದಲ್ಲಿ ಅವರೊಂದಿಗೆ ಆಗಮಿಸಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಕರೆದೊಯ್ಯಲಾಯಿತು.
ಪ್ರಮೋದ್ ಮುತಾಲಿಕ್ ಮೈದಾನಕ್ಕೆ ಬರುವ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಮೈದಾನ ಸುತ್ತಲೂ ಪೊಲೀಸ್ ಬಂದೋಬಸ್ತ್ ಆಯೋಜಿಸಿ ಸಂಚರಿಸುವ ಎಲ್ಲಾ ಕಾರುಗಳನ್ನು ಪೊಲೀಸರು ತಪಾಸಣೆ ಮಾಡುತ್ತಿರುವುದು ಕಂಡು ಬಂದಿತು.
ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ನಾಪತ್ತೆ – Vishwanews24
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಹೀಗಾಗಿ ನಮಗೆ ಪ್ರತಿಭಟನೆ ಮಾಡಲು ಬಿಡುತ್ತಿಲ್ಲ. ಆತ ಹಿಂದೂ ಮತ್ತು ಕನ್ನಡ ವಿರೋಧಿ ಹಾಗಾಗಿ ಎಲ್ಲಿಯೂ ಆಚರಣೆ ಮಾಡಲು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲಿ ಆಚರಣೆ ತಡೆಯುತ್ತೇವೆ. ಎಲ್ಲ ಮಹಾಪುರುಷರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಮಾಡಬಾರದು. ಮಹಾನಗರ ಪಾಲಿಕೆ ತೆಗೆದುಕೊಂಡ ನಿಲುವನ್ನು ಖಂಡಿಸುತ್ತೇವೆ. ಎಐಎಂಐಎಂ ದೇಶ ದ್ರೋಹಿ ಪಕ್ಷವಾಗಿದೆ. ದೇಶ ದ್ರೋಹಿಗಳನ್ನು ಬಿಜೆಪಿ ಬೆಳೆಸುತ್ತಿದೆ. ಇದಕ್ಕೆ ನಮ್ಮ ವಿರೋಧವಿದೆ. ಮತಾಂತರ ಮಾಡಿದವರ ಜಯಂತಿ ಆಚರಣೆ ಸರಿಯಲ್ಲ. ಟಿಪ್ಪು ಜಯಂತಿ ಆಚರಣೆ ಬೇಡವೆಂದು ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಲಾಗುವುದು ಎಂದರು.
ಉಳ್ಳಾಲ : ಸಿಸಿ ಕ್ಯಾಮರಾ ಹಾನಿ ಪ್ರಕರಣ :- ಇಬ್ಬರು ಆರೋಪಿಗಳ ಬಂಧನ – Vishwanews24
