ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಮೂಲಕ ಹುಬ್ಬಳ್ಳಿ ಮಹಾನಗರಪಾಲಿಕೆ ಐತಿಹಾಸಿಕ ನಿರ್ಣಯ ಪ್ರಕಟಿಸಿದೆ.
ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೇಯರ್ ಈರೇಶ ಅವರು, ನಗರಪಾಲಿಕೆ ಸಮಿತಿಯ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಒಟ್ಟು 6 ಸಂಘಟನೆಗಳಿಂದ ಗಣೇಶೋತ್ಸವಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು, ಅನುಮತಿ ವಿರೋಧಿಸಿ 11 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸರ್ವ ಪಕ್ಷಗಳು ಈ ಬಗ್ಗೆ ಸತತವಾಗಿ ಚರ್ಚಿಸಿ ಒಂದು ಅಂತಿಮ ನಿರ್ಣಯ ತೆಗೆದುಕೊಂಡಿದ್ದೆವೆ. ಸರ್ವ ಪಕ್ಷಗಳ ಸಮಿತಿ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ವರದಿ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಮುಂದೆ ಪ್ರತಿ ವರ್ಷವೂ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುತ್ತದೆ. ಆದರೆ ಮೂರು ದಿನ ಗಣೇಶೋತ್ಸವ ಆಚರಣೆ ಮಾತ್ರ ಇರುತ್ತದೆ. ಮುಂದಿನ ವರ್ಷ ಪರಿಸ್ಥಿತಿ ನೋಡಿಕೊಂಡು ದಿನಗಳನ್ನು ಹೆಚ್ಚಿಗೆ ಮಾಡಲಾಗುತ್ತದೆ ಎಂದು ತಿಳಿಸಿದರು.
ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…