Featured

ಹುಬ್ಬಳ್ಳಿ: ಉದ್ಯಮಿ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ​: ಮಗನ ಕೊಲೆಗೆ ತಂದೆಯಿಂದಲೇ ಸುಪಾರಿ – Vishwanews24

ಹುಬ್ಬಳ್ಳಿ: ಉದ್ಯಮಿ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ​: ಮಗನ ಕೊಲೆಗೆ ತಂದೆಯಿಂದಲೇ ಸುಪಾರಿ

ಹುಬ್ಬಳ್ಳಿ: ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ. ‘ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್​ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ.

ಉದ್ಯಮಿ ಭರತ್ ಜೈನ್​ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್​ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಸಹೋದರ ದೂರು ನೀಡಿದ್ದರು. ಮಗ ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ತಂದೆ ಭರತ ಜೈನ್ ಹೈಡ್ರಾಮ ಮಾಡಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ತಂದೆ ಮೇಲೆಯೇ ಅನುಮಾನ ಮೂಡಿತ್ತು.

ಭರತ್ ಜೈನ್​ರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಮಗನ ಹತ್ಯೆಗೆ ಸ್ಥಳೀಯ ಹಂತಕರಿಗೆ ಸುಪಾರಿ ನೀಡಿದ್ದಾಗಿ ತಂದೆ ಬಾಯ್ಬಿಟ್ಟಿದ್ದಾರೆ. ಇವರ ಹೇಳಿಕೆ ಆಧರಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹುಬ್ಬಳ್ಳಿ ತಾಲೂಕಿನ ದೇವರಗಿಡಿಹಾಳ ಗ್ರಾಮದಲ್ಲಿ ಭರತ್ ಜೈನ್​ಗೆ ಸೇರಿದ ತೋಟದ ಮನೆಯಲ್ಲಿ ಮಗನ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮಗನ ಹತ್ಯೆಗೆ ಸುಪಾರಿ ಕೊಟ್ಟಿದ್ದು ಏಕೆ ಎಂಬ ಕಾರಣ ಇನ್ನೂ ಗೊತ್ತಾಗಿಲ್ಲ. ಪ್ರಕರಣ ದಾಖಲಾದ 48 ಗಂಟೆಯೊಳಗೆ ಕೇಶ್ವಾಪುರ ಠಾಣೆ ಪೊಲೀಸ್ ಇನ್​ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago