Featured

ಹುಬ್ಬಳ್ಳಿ: ಉದ್ಯಮಿ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ​: ಮಗನ ಕೊಲೆಗೆ ತಂದೆಯಿಂದಲೇ ಸುಪಾರಿ – Vishwanews24

ಹುಬ್ಬಳ್ಳಿ: ಉದ್ಯಮಿ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ​: ಮಗನ ಕೊಲೆಗೆ ತಂದೆಯಿಂದಲೇ ಸುಪಾರಿ

ಹುಬ್ಬಳ್ಳಿ: ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ. ‘ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್​ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ.

ಉದ್ಯಮಿ ಭರತ್ ಜೈನ್​ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್​ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಸಹೋದರ ದೂರು ನೀಡಿದ್ದರು. ಮಗ ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ತಂದೆ ಭರತ ಜೈನ್ ಹೈಡ್ರಾಮ ಮಾಡಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ತಂದೆ ಮೇಲೆಯೇ ಅನುಮಾನ ಮೂಡಿತ್ತು.

ಭರತ್ ಜೈನ್​ರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಮಗನ ಹತ್ಯೆಗೆ ಸ್ಥಳೀಯ ಹಂತಕರಿಗೆ ಸುಪಾರಿ ನೀಡಿದ್ದಾಗಿ ತಂದೆ ಬಾಯ್ಬಿಟ್ಟಿದ್ದಾರೆ. ಇವರ ಹೇಳಿಕೆ ಆಧರಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹುಬ್ಬಳ್ಳಿ ತಾಲೂಕಿನ ದೇವರಗಿಡಿಹಾಳ ಗ್ರಾಮದಲ್ಲಿ ಭರತ್ ಜೈನ್​ಗೆ ಸೇರಿದ ತೋಟದ ಮನೆಯಲ್ಲಿ ಮಗನ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮಗನ ಹತ್ಯೆಗೆ ಸುಪಾರಿ ಕೊಟ್ಟಿದ್ದು ಏಕೆ ಎಂಬ ಕಾರಣ ಇನ್ನೂ ಗೊತ್ತಾಗಿಲ್ಲ. ಪ್ರಕರಣ ದಾಖಲಾದ 48 ಗಂಟೆಯೊಳಗೆ ಕೇಶ್ವಾಪುರ ಠಾಣೆ ಪೊಲೀಸ್ ಇನ್​ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago